ADVERTISEMENT

ಉಗ್ರರಿಗೆ ಆಶ್ರಯ: ಸಿಂಗ್‌ ಬಂಧನ ವಿಚಾರದಲ್ಲಿ ಆರ್‌ಎಸ್‌ಎಸ್‌ನ ಕುಟುಕಿದ ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 14:13 IST
Last Updated 14 ಜನವರಿ 2020, 14:13 IST
ಕಾಂಗ್ರೆಸ್‌ ನಾಯಕ ಅಧೀರ್‌ ಚೌಧರಿ
ಕಾಂಗ್ರೆಸ್‌ ನಾಯಕ ಅಧೀರ್‌ ಚೌಧರಿ   

ನವದೆಹಲಿ: ಹಿಜ್ಬುಲ್‌ ಮುಜಾಹಿದ್ದೀನ್ ಉಗ್ರರಿಗೆ ತಮ್ಮ ನಿವಾಸದಲ್ಲಿ ಆಶ್ರಯ ನೀಡಿದ ಆರೋಪದಡಿ ಬಂಧಿತರಾಗಿರುವ ಡಿವೈಎಸ್‌ಪಿ ದೇವೇಂದ್ರ ಸಿಂಗ್‌ ವಿಚಾರವಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಬಣ್ಣ, ನಂಬಿಕೆ ಮತ್ತು ಧರ್ಮವನ್ನು ಲೆಕ್ಕಿಸದೇ ನಮ್ಮ ದೇಶದ ಶತ್ರುಗಳನ್ನು ಖಂಡಿಸಬೇಕು ಎಂದು ಹೇಳಿರುವ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ಚೌಧರಿ, ‘ಆರೋಪಿ ದೇವೇಂದ್ರ ಸಿಂಗ್‌ ಬದಲು ದೇವೇಂದ್ರ ಖಾನ್‌ ಆಗಿದ್ದರೆ, ಆರ್‌ಎಸ್‌ಎಸ್‌ ಟ್ರೋಲ್‌ ತಂಡವು ಕರ್ಕಶವಾದ ಗದ್ದಲವೆಬ್ಬಿಸುತ್ತಿತ್ತು. ದೇಶದ ಶತ್ರುಗಳನ್ನು ಅವರ ವರ್ಣ, ನಂಬಿಕೆ ಮತ್ತು ಧರ್ಮಗಳನ್ನು ಲೆಕ್ಕಿಸದೇ ನಾವು ಖಂಡಿಸಬೇಕು’ ಎಂದು ಹೇಳಿದ್ದಾರೆ.

ಪುಲ್ವಾಮಾ ಘಟನೆಯ ಬಗ್ಗೆ ಮಾತನಾಡಿರುವ ಅವರು, ‘ಪುಲ್ವಾಮಾ ಘಟನೆಯ ಹಿಂದಿನ ನಿಜವಾದ ಅಪರಾಧಿ ಯಾರು ಎಂಬ ಬಗ್ಗೆ ಈಗ ಪ್ರಶ್ನೆ ಎದ್ದುನಿಂತಿದೆ. ಅದರ ಬಗ್ಗೆ ಹೊಸದಾಗಿ ತನಿಖೆ ಆಗಬೇಕು’ ಎಂದು ಚೌಧರಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.