ADVERTISEMENT

ಪಂಜಾಬ್: ಎಎಸ್ಐ ಕೈಕತ್ತರಿಸಿದ ದುಷ್ಕರ್ಮಿಗಳು ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2020, 11:00 IST
Last Updated 12 ಏಪ್ರಿಲ್ 2020, 11:00 IST
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್    

ಚಂಡೀಗಢ: ನಾಕಾಬಂದಿಯ ವೇಳೆ ಎಎಸ್ಐ ಕೈ ಕತ್ತರಿಸಿದ್ದ ಆರೋಪಿಗಳನ್ನು ಪತ್ತೆ ಮಾಡಿದ್ದುವಶಕ್ಕೆ ಪಡೆಯಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಭಾನುವಾರ ಪಂಜಾಬ್ ಪಟಿಯಾಲ ಜಿಲ್ಲೆಯಲ್ಲಿ ನಿಹಾಂಗ್ ಸಿಖ್ಖರ ಗುಂಪು ಸಹಾಯಕ ಸಬ್ ಇನ್ಸ್ ಪೆಕ್ಟರ್‌ನ ಕೈ ಕತ್ತರಿಸಿದ್ದರು. ಈ ಸಂಬಂಧ ಆರು ಮಂದಿ ಪೊಲೀಸರಿಗೂಗಾಯಗಳಾಗಿದ್ದವು.

ಈ ಸಂಬಂಧ ಆರೋಪಿಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ತನಿಖೆ ಮುಂದುವರಿದಿದೆ. ರಾಜ್ಯದಲ್ಲಿ ಯಾರೇ ಆಗಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕೂಡಲೆ ಕಠಿಣ ಕ್ರಮ ಕೈಗೊಳ್ಳುವಂತೆಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ADVERTISEMENT

ಬೆಳಿಗ್ಗೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕರಿಂದ ಐದು ಮಂದಿ ಗುಂಪನ್ನು ಮಂಡಿ ಬೋರ್ಡ್‌ ಠಾಣೆ ಪೊಲೀಸರು ಪಟಿಯಾಲದ ತರಕಾರಿ ಮಾರುಕಟ್ಟೆ ಬಳಿ ತಡೆದಿದ್ದಾರೆ. ಲಾಕ್‌ಡೌನ್‌ ಪಾಸ್‌ ತೋರಿಸುವಂತೆ ಗುಂಪಿಗೆ ಪೊಲೀಸರು ತಿಳಿಸಿದ್ದಾರೆ. ಆದರೆ, ತಪ್ಪಿಸಿಕೊಳ್ಳಲೆತ್ನಿಸಿದ ಗುಂಪು ಪೊಲೀಸರತ್ತ ವಾಹನ ನುಗ್ಗಿಸಲು ಯತ್ನಿಸಿದೆ. ನಂತರ ಪೊಲೀಸರ ಮೇಲೇ ದಾಳಿ ನಡೆಸಿದೆ ಎಂದು ಪಟಿಯಾಲ ಜಿಲ್ಲಾ ಎಸ್‌ಪಿ ಮಂದೀಪ್‌ ಸಿಂಗ್‌ ಸಿದು ತಿಳಿಸಿದ್ಧಾರೆ.

ಘಟನೆಯಲ್ಲಿ ಎಎಸ್‌ಐ ಹರ್ಜೀತ್‌ ಸಿಂಗ್‌ ಎಂಬುವರ ಕೈಕತ್ತರಿಸಲಾಗಿದ್ದು, ಅವರನ್ನು ರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರನ್ನು ಚಂಡೀಗಡದ ಪಿಜಿಐಎಂಇಆರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.