ADVERTISEMENT

ಜೈಲಿನಲ್ಲಿ ಅರವಿಂದ ಕೇಜ್ರಿವಾಲ್ ಭೇಟಿಯಾದ ಪಂಜಾಬ್‌ ಸಿಎಂ ಭಗವಂತ್‌ ಮಾನ್‌

ಪಿಟಿಐ
Published 15 ಏಪ್ರಿಲ್ 2024, 13:21 IST
Last Updated 15 ಏಪ್ರಿಲ್ 2024, 13:21 IST
ಭಗವಂತ್‌ ಮಾನ್‌
ಭಗವಂತ್‌ ಮಾನ್‌   

ನವದೆಹಲಿ: ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ತಿಹಾರ್‌ ಜೈಲಿನಲ್ಲಿ ಭೇಟಿ ಮಾಡಿ ಇಂಟರ್‌ಕಾಂ ಮೂಲಕ ಮಾತನಾಡಿದರು ಎಂದು ಅಧಿಕಾರಿಗಳು ತಿಳಿಸಿದರು.

ಕಾರಾಗೃಹದ ಕೈಪಿಡಿಯ ನಿಯಮದ ಪ್ರಕಾರ, ಮಾನ್‌ ಅವರು ಸಾಮಾನ್ಯ ಸಂದರ್ಶಕರಂತೆ ಬಂದು ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದರು ಎಂದು ತಿಳಿಸಿದರು.

ಶನಿವಾರ ಎಎಪಿ ಸಂಸದ ಸಂಜಯ್ ಸಿಂಗ್‌, ‘ತಿಹಾರ್‌ ಕಾರಾಗೃಹದ ಅಧಿಕಾರಿಗಳು ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಅವಕಾಶ ನೀಡುತ್ತಿಲ್ಲ’ ಎಂದು ಆರೋಪಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.