ಪಂಜಾಬ್: ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ ಇತರೆ ಎಲ್ಲಾ ಇಲಾಖೆಗಳ ಖರ್ಚುವೆಚ್ಚಗಳಿಗೆ ಹಣಕಾಸು ನಿಲ್ಲಿಸಿದ್ದು, ಕೊರೊನಾ ಸೋಂಕು ನಿರ್ಮೂಲನೆಗೆ ಮಾತ್ರ ಹಣ ಮೀಸಲಿರಿಸಿದೆ.
ಕೊರೊನಾ ಸೋಂಕು ವಿರುದ್ಧ ಹೋರಾಟ ನಡೆಸಲು ರಾಜ್ಯದ ಎಲ್ಲಾ ಇಲಾಖೆಗಳ ಖರ್ಚು ವೆಚ್ಚಗಳನ್ನು ತಡೆ ಹಿಡಿದು ಕೊರೊನಾ ಸೋಂಕು ಹೋರಾಟಕ್ಕಾಗಿ ಹಣ ಮೀಸಲಿಡಲಾಗಿದೆ ಎಂದು ಶನಿವಾರ ಮುಖ್ಯಮಂತ್ರಿಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ಆದೇಶ ಹೊರಡಿಸಿದ್ದು, ತತಕ್ಷಣ ಕೊರೊನಾ ಸೋಂಕು ನಿವಾರಣೆಗಾಗಿ ಹಣ ಬೇಕಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.