ADVERTISEMENT

ಪ್ರಯೋಗಗಳನ್ನು ನಡೆಸಲು ಇದು ಸ್ಥಳವಲ್ಲ: ಪಟಿಯಾಲ ಘರ್ಷಣೆ ಕುರಿತು ರಾಹುಲ್‌ ಬೇಸರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2022, 15:43 IST
Last Updated 29 ಏಪ್ರಿಲ್ 2022, 15:43 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಪಂಜಾಬ್‌ನ ಪಟಿಯಾಲದಲ್ಲಿ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಅವರು, ‘ಪಟಿಯಾಲದ ದೃಶ್ಯಗಳು ಮನಕಲಕುವಂತಿವೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ... ಪಂಜಾಬ್‌ನಂತಹ ಸೂಕ್ಷ್ಮ ಗಡಿ ರಾಜ್ಯದಲ್ಲಿ ಶಾಂತಿ ಮತ್ತು ಸಾಮರಸ್ಯವು ಅತ್ಯಂತ ಅವಶ್ಯಕವಾಗಿದೆ. ಪ್ರಯೋಗಗಳನ್ನು ನಡೆಸಲು ಇದು ಸ್ಥಳವಲ್ಲ’ ಎಂದು ಹೇಳಿದ್ದಾರೆ.

‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪಂಜಾಬ್ ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದೂ ರಾಹುಲ್‌ ಟ್ವೀಟಿಸಿದ್ದಾರೆ.

ADVERTISEMENT

ಪಂಜಾಬ್‌ನ ಪಟಿಯಾಲದಲ್ಲಿ ಎರಡು ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದೆ. ಶಿವಸೇನಾ ನಡೆಸುತ್ತಿದ್ದ ಮೆರವಣಿಗೆ ಮೇಲೆ ಗುಂಪೊಂದು ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.