ಥಾಣೆ: ಕಲು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ,ಜಿಲ್ಲೆಯ ಮುರ್ಬದ್ ಹಾಗೂ ಶಹಾಪುರ ಪ್ರದೇಶಗಳ ನಡುವಣ ಸಂಪರ್ಕ ಕಲ್ಪಿಸುತ್ತಿದ್ದ ಮೇಲ್ಸೇತುವೆಯನ್ನು ಲೋಕೋಪಯೋಗಿ ಇಲಾಖೆ ಕೆಡವಿದೆ.
ನೂರು ವರ್ಷ ಹಳೆಯದಾದ ಈ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಬಳಕೆಗೆ ಅಪಾಯಕಾರಿ ಎಂದು ನಿರ್ಧರಿಸಲಾಗಿತ್ತು. ಹೀಗಾಗಿ ಸೇತುವೆಯನ್ನು ಉರುಳಿಸಲಾಗಿದೆ.
ಸದ್ಯ ಅದೇ ಸ್ಥಳದಲ್ಲಿ ಹೊಸ ಮೇಲ್ಸೇತುವೆ ನಿರ್ಮಿಸಲು ಮನವಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.