ADVERTISEMENT

ರಫೇಲ್‌: ಪಿಎಸಿ ಪರಿಶೀಲನೆಗೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2019, 18:28 IST
Last Updated 29 ಆಗಸ್ಟ್ 2019, 18:28 IST
   

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ನರೇಂದ್ರ ಮೋದಿ ನೇತೃತ್ವದ ಹಿಂದಿನ ಸರ್ಕಾರದಿಂದ ಯಾವುದೇ ಲೋಪ ಆಗಿಲ್ಲ ಎಂದು ಮಹಾಲೇಖಪಾಲರು (ಸಿಎಜಿ) ವರದಿ ನೀಡಿದ್ದರು. ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು (ಪಿಎಸಿ) ಇದನ್ನು ಪರಿಶೀಲನೆಗೆ ಒಳಪಡಿಸಲಿದೆ.

ಭಾರತದ ವಾಯುಪಡೆಯ ಕಾರ್ಯಾಚರಣೆ ಸನ್ನದ್ಧತೆಯೂ ಪರಿಶೀಲನೆಗೆ ಒಳಪಡಲಿದೆ. ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್ ಚೌಧುರಿ ಅವರು ಪಿಎಸಿಯ ಅಧ್ಯಕ್ಷ.

ರಕ್ಷಣೆಯಿಂದ ಹಿಡಿದು ಕೃಷಿವರೆಗೆ ಸಿಎಜಿ ನೀಡಿರುವ ಹಲವು ವರದಿಗಳನ್ನು ಪರಿಶೀಲನೆಗೆ ಒಳಪಡಿಸಲು ಪಿಎಸಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್‌ ವಿಮಾ ಯೋಜನೆಯು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರಿ ಚರ್ಚೆಗೆ ಒಳಗಾಗಿತ್ತು. ಈ ವಿಚಾರವನ್ನೂ ಪರಿಶೀಲನೆ ನಡೆಸಲು ಸಮಿತಿಯು ನಿರ್ಧರಿಸಿದೆ.

ADVERTISEMENT

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯ ಸಮರ್ಪಕವಾಗಿಲ್ಲ ಎಂದು ಟೀಕೆಗಳು ಕೇಳಿ ಬಂದಿದ್ದವು. ಜಿಎಸ್‌ಟಿ ಜಾರಿಯನ್ನೂ ಪರಿಶೀಲಿಸಲು ಸಿಎಜಿ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.