
ಪ್ರಜಾವಾಣಿ ವಾರ್ತೆಲಖನೌ (ಪಿಟಿಐ):ಉತ್ತರ ಪ್ರದೇಶದ ಮಾಜಿ ಸಚಿವ, ಪಕ್ಷೇತರ ಅಭ್ಯರ್ಥಿ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಹಾಗೂ ಇತರ 17 ಮಂದಿಯ ಮೇಲೆ ದೂರು ದಾಖಲಾಗಿದೆ. ಸಮಾಜವಾದಿ ಪಕ್ಷದ ಮತಗಟ್ಟೆ ಏಜೆಂಟ್ ಒಬ್ಬರನ್ನು ಥಳಿಸಿದ ಆರೋಪ ಇವರ ಮೇಲೆ ಇದೆ.
ಫೆ. 27ರಂದು ಐದನೇ ಹಂತದ ಮತದಾನದ ಸಂದರ್ಭದಲ್ಲಿ ರಾಕೇಶ್ ಕುಮಾರ್ ಪಾಸಿ ಅವರ ಮೇಲೆ ಹಲ್ಲೆ ಆಗಿತ್ತು. ಅವರನ್ನು ಎಳೆದೊಯ್ದು ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.