ADVERTISEMENT

ರೈತ ಪರವಾಗಿರುವವರ ಮೇಲೆ ದಾಳಿ: ರಾಹುಲ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 7:46 IST
Last Updated 4 ಮಾರ್ಚ್ 2021, 7:46 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಕೇಂದ್ರ ಸರ್ಕಾರದ ಧೋರಣೆಗಳನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ, ರೈತರ ಪರವಾಗಿರುವವರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆ ಮೂಲಕ ದಾಳಿ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ.

ಬಾಲಿವುಡ್‌ ನಟಿ ತಾಪ್ಸಿ ಪನ್ನು, ನಿರ್ದೇಶಕ ಮತ್ತು ನಿರ್ಮಾಪಕರಾದ ಅನುರಾಗ್‌ ಕಶ್ಯಪ್‌ ಹಾಗೂ ರಿಲಯನ್ಸ್‌ ಎಂಟರ್‌ಟೈನ್‌ಮೆಂಟ್‌ ಗ್ರೂಪ್‌ನ ಸಿಇಒ ಶಿಭಾಶಿಶ್‌ ಸರ್ಕಾರ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ‌ ಆದಾಯ ತೆರಿಗೆ ಇಲಾಖೆ ಬುಧವಾರ ಶೋಧ ಕಾರ್ಯ ನಡೆಸಿದ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಹಿಂದಿಯ ನುಡಿಗಟ್ಟುಗಳನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಅವರು, ‘ಆದಾಯ ತೆರಿಗೆ ಇಲಾಖೆ ತನ್ನ ತಾಳಕ್ಕೆ ಕುಣಿಯವಂತೆ ಕೇಂದ್ರ ಸರ್ಕಾರ ಮಾಡಿದೆ’ ಎಂದು ಟೀಕಿಸಿದ್ದಾರೆ.

ADVERTISEMENT

‘ಕೇಂದ್ರ ಸರ್ಕಾರದ ಮುಂದೆ ಮಾಧ್ಯಮವೂ ತಲೆಬಾಗಿದೆ ಮತ್ತು ರೈತರ ಪರವಾಗಿರುವವರ ಮೇಲೆ ದಾಳಿ ನಡೆಸಲಾಗುತ್ತಿದೆ’ ಎಂದು ಅವರು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.