ಕೊಯಂಬತ್ತೂರು: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವು ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್ಟಿ), ಪುನರ್ಪರಿಶೀಲಿಸುವುದಕ್ಕೆ ಬದ್ಧವಾಗಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ತಿಳಿಸಿದ್ದಾರೆ.
ಪ್ರಸ್ತುತ ಇರುವ ತೆರಿಗೆ ವ್ಯವಸ್ಥೆಯು ಸಣ್ಣ ಮತ್ತು ಮಧ್ಯಮ ಕೈಗಾರಿಕಗಳನ್ನು(ಎಂಎಸ್ಎಂಇ) ದುರ್ಬಲಗೊಳಿಸಿದೆ ಎಂದು ಕೈಗಾರಿಕಾ ಪ್ರತಿನಿಧಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಹೇಳಿದರು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಪ್ರಸ್ತುತ ಇರುವ ಜಿಎಸ್ಟಿಗೆ ಹೊಸ ರೂಪ ನೀಡಿ, ಒಂದು ತೆರಿಗೆ ಕನಿಷ್ಠ ತೆರಿಗೆಯನ್ನು ಜಾರಿಗೊಳಿಸುವ ಭರವಸೆಯನ್ನೂ ಇದೇ ವೇಳೆ ನೀಡಿದರು.
ತಮಿಳುನಾಡು ವಿಧಾನಸಭೆ ಚುನಾವಣೆಗೆ ಪ್ರಚಾರ ಆರಂಭಿಸಿರುವ ರಾಹುಲ್ ಗಾಂಧಿ, ‘ಚೀನಾ ಮತ್ತು ಬಾಂಗ್ಲಾದೇಶದಂತಹ ರಾಷ್ಟ್ರಗಳ ಜೊತೆ ಸ್ಪರ್ಧಿಸಲು ದೇಶದ ಎಂಎಸ್ಎಂಇಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಅಗತ್ಯತೆ ಇದೆ. ಭಾರತದ ಭವಿಷ್ಯವೇ ಈ ಎಂಎಸ್ಎಂಇಗಳು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.