ADVERTISEMENT

ಕಾಂಗ್ರೆಸ್ ಅವನತಿಗೆ ಕಾರಣವಾಗುತ್ತಿರುವ ರಾಹುಲ್: ಆದಿತ್ಯನಾಥ್

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 14:46 IST
Last Updated 26 ಮಾರ್ಚ್ 2021, 14:46 IST
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್   

ನವದೆಹಲಿ: ಕಾಂಗ್ರೆಸ್ ಪಕ್ಷದ ಅವನತಿಗೆ ರಾಹುಲ್ ಗಾಂಧಿ ಕಾರಣವಾಗುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ತಮ್ಮದೇ ಆದ ಮಾತುಗಳನ್ನು ಆಡುವುದಿಲ್ಲ. ಬೇರೆಯವರ ಸಿದ್ಧಾಂತಗಳನ್ನು ಬಳಸಿಕೊಳ್ಳುತ್ತಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ತಮ್ಮ ಬುದ್ಧಿವಂತಿಕೆಯಿಂದ ಏನನ್ನೂ ಹೇಳುವುದಿಲ್ಲ. ಇನ್ನೊಬ್ಬರ ಬುದ್ಧಿವಂತಿಕೆಯ ವಿಚಾರಗಳನ್ನು ಹೇಳುವುದರಿಂದ ತಾರ್ಕಿಕ ಪ್ರಜ್ಞೆಯನ್ನು ಹೊಂದಿರುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.

ADVERTISEMENT

ರಾಹುಲ್ ಉತ್ತರ ಪ್ರದೇಶಕ್ಕೆ ಹೆಚ್ಚೇನು ಭೇಟಿ ನೀಡುವುದಿಲ್ಲ. ಅದರಿಂದ ಇಲ್ಲಿನ ನಿಜ ಪರಿಸ್ಥಿತಿ ಬಗ್ಗೆ ಅವರಿಗೆ ಗೊತ್ತಿಲ್ಲ ಎಂದು ಆದಿತ್ಯನಾಥ್ ಟೀಕಿಸಿದ್ದಾರೆ.

ಭಾರತವು ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಿದಾಗ ರಾಹುಲ್ ಗಾಂಧಿ ದೇಶದ ಜನತೆಯನ್ನು ನೆನಪಿಸಿಕೂಳ್ಳುವುದಿಲ್ಲ. ಬದಲಿಗೆ ಇಟಲಿಯನ್ನು ನೆನಪಿಸಿಕೊಳ್ಳುತ್ತಾರೆ. ಅವರು ದಕ್ಷಿಣದಲ್ಲಿದ್ದಾಗ ಉತ್ತರ ಮತ್ತು ಉತ್ತರದಲ್ಲಿದ್ದಾಗ ದಕ್ಷಿಣವನ್ನು ಟೀಕಿಸುತ್ತಾರೆ ಎಂದು ಕೇರಳದ ವಯನಾಡ್ಸಂಸದರ ವಿರುದ್ಧ ಆರೋಪದ ಸುರಿಮಳೆಗೈದರು.

ರಾಹುಲ್ ಗಾಂಧಿ ವಿದೇಶದಲ್ಲಿರುವಾಗ ಭಾರತವನ್ನೇ ಟೀಕಿಸುತ್ತಾರೆ. ಇಂತಹ ವ್ಯಕ್ತಿತ್ವವನ್ನು ಹೊಂದಿರುವ ವ್ಯಕ್ತಿಯ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.