ADVERTISEMENT

ರಾಹುಲ್ ಗಾಂಧಿ ಇಟಲಿಗೆ: ಗಾಳಿ ಸುದ್ದಿ ಬೇಡ ಎಂದ ಸುರ್ಜೇವಾಲ

ಪಿಟಿಐ
Published 31 ಡಿಸೆಂಬರ್ 2021, 8:41 IST
Last Updated 31 ಡಿಸೆಂಬರ್ 2021, 8:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಅಲ್ಪಾವಧಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದ 137ನೇ ಸಂಸ್ಥಾಪನಾ ದಿನಾಚರಣೆ (ಮಂಗಳವಾರ) ಬಳಿಕ ಅವರುಇಟಲಿಗೆ ತೆರಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ, 'ರಾಹುಲ್‌ ಗಾಂಧಿ ವೈಯಕ್ತಿಕ ಕಾರಣಗಳಿಗಾಗಿ ಅಲ್ಪಾವಧಿಯ ವಿದೇಶ ಭೇಟಿಗೆ ತೆರಳಿದ್ದಾರೆ. ಬಿಜೆಪಿ ಮತ್ತು ಅವರ ಗೆಳೆಯರು ಮಾಧ್ಯಮಗಳಲ್ಲಿ ಅನವಶ್ಯಕವಾಗಿ ಗಾಳಿ ಸುದ್ದಿಗಳನ್ನು ಹರಡಬಾರದು' ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರು ಜನವರಿ 3ರಂದು ಪಂಜಾಬ್‌ನ ಮೊಗಾದಲ್ಲಿನ ಚುನಾವಣಾ ರ್‍ಯಾಲಿಯಲ್ಲಿ ಭಾಗಿಯಾಗುವುದು ನಿಗದಿಯಾಗಿದೆ. ಆ ವೇಳೆಗೆ ಅವರು ಹಿಂದಿರುಗಲಿರುವುದು ಕಾಂಗ್ರೆಸ್‌ ಮೂಲಗಳಿಂದ ತಿಳಿದು ಬಂದಿದೆ.

ADVERTISEMENT

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್‌, ಗೋವಾ ಹಾಗೂ ಮಣಿಪುರ ಸೇರಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಜನವರಿ ಮಧ್ಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.