ADVERTISEMENT

ಇಟಲಿಯಿಂದ ಬಂದ ರಾಹುಲ್ ಗಾಂಧಿಯನ್ನು ತಪಾಸಣೆಗೊಳಪಡಿಸಬೇಕು: ರಮೇಶ್ ಬಿಧೂರಿ

ಏಜೆನ್ಸೀಸ್
Published 4 ಮಾರ್ಚ್ 2020, 11:35 IST
Last Updated 4 ಮಾರ್ಚ್ 2020, 11:35 IST
ರಮೇಶ್ ಬಿಧೂರಿ
ರಮೇಶ್ ಬಿಧೂರಿ   

ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕು ಹಬ್ಬುತ್ತಿದ್ದು ಇತ್ತೀಚೆಗೆ ಇಟಲಿಗೆ ಹೋಗಿ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿ ಎಂದು ದೆಹಲಿಯಬಿಜೆಪಿ ಸಂಸದ ರಮೇಶ್ ಬಿಧೂರಿ ಹೇಳಿದ್ದಾರೆ.

ರಾಹುಲ್ ಗಾಂಧಿ ಇತ್ತೀಚೆಗೆ ಇಟಲಿಗೆ ಹೋಗಿ ಬಂದಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಪಡಿಸಲಾಗಿದೆಯೇ ಎಂಬುದು ನನಗೆ ತಿಳಿದಿಲ್ಲ. ಅವರಿಗೆ ಮಾರಣಾಂತಿಕ ಕೊರೊನಾ ವೈರಸ್ ಸೋಂಕು ತಗಲಿಲ್ಲ ಎಂಬುದನ್ನು ದೃಢಪಡಿಸಲು ವೈದ್ಯಕೀಯ ತಪಾಸಣೆಗೊಳಪಡಲಿ ಎಂದಿದ್ದಾರೆ ಬಿಧೂರಿ.

ಸಂಸತ್ತಿನ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿಧೂರಿ, ಪ್ರಧಾನಿ ನರೇಂದ್ರ ಮೋದಿಯವರೇ ಕೊರೊನಾ ವೈರಸ್ ಬಗ್ಗೆ ಹೇಳಿದ್ದಾರೆ. ಭಾರತದಲ್ಲಿ 28 ಮಂದಿಗೆ ಸೋಂಕು ದೃಢಪಟ್ಟಿದ್ದು,ಇದು ಗಂಭೀರ ಪರಿಸ್ಥಿತಿ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.