ನವದೆಹಲಿ: ಕಾಂಗ್ರೆಸ್ ಮುಖಂಡರಾದ ಕರ್ನಾಟಕದ ಎನ್.ಎಸ್. ಬೋಸರಾಜು, ಸಲೀಂ ಅಹ್ಮದ್ ಹಾಗೂ ಕೇರಳದ ಶ್ರೀನಿವಾಸನ್ ಕೃಷ್ಣನ್ ಅವರನ್ನು ಎಐಸಿಸಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದು, ಅವರಿಗೆ ತೆಲಂಗಾಣದ ಉಸ್ತುವಾರಿ ವಹಿಸಲಾಗಿದೆ.
ಪಕ್ಷದ ಪುನರ್ರಚನೆಯ ಭಾಗವಾಗಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ನೇಮಕ ಮಾಡಿದ್ದಾರೆ.
‘ತೆಲಂಗಾಣ ಉಸ್ತುವಾರಿಯಾಗಿದ್ದಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದುಅವರ ಸೇವೆಯನ್ನು ಪಕ್ಷ ಪ್ರಶಂಸಿಸುತ್ತದೆ’ ಎಂದು ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.