ADVERTISEMENT

ಹರಿಯಾಣ: ಸೋನಿಪತ್‌ಗೆ ರಾಹುಲ್ ದಿಢೀರ್ ಭೇಟಿ; ಭತ್ತ ಬಿತ್ತನೆ, ಟ್ರ್ಯಾಕ್ಟರ್ ಚಾಲನೆ

ಪಿಟಿಐ
Published 8 ಜುಲೈ 2023, 5:07 IST
Last Updated 8 ಜುಲೈ 2023, 5:07 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   (ಸಂಗ್ರಹ ಚಿತ್ರ)

ಚಂಡೀಗಢ: ಹರಿಯಾಣದ ಸೋನಿಪತ್ ಜಿಲ್ಲೆಗೆ ಶನಿವಾರ ಬೆಳಿಗ್ಗೆ ತೆರಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗ್ರಾಮಸ್ಥರನ್ನು ಭೇಟಿಯಾಗಿದ್ದಾರೆ.

ಇದೇ ವೇಳೆ ರೈತರೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ, ಗದ್ದೆಯಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಸೋನಿಪತ್‌ಗೆ ದಿಢೀರ್ ಭೇಟಿ ನೀಡಿರುವ ರಾಹುಲ್ ಗಾಂಧಿ, ರೈತರೊಂದಿಗೆ ಭತ್ತ ಬಿತ್ತನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಗಬೀರ್ ಸಿಂಗ್ ಮಲಿಕ್ ತಿಳಿಸಿದ್ದಾರೆ.

ADVERTISEMENT

ದೆಹಲಿಯಿಂದ ಹಿಮಾಚಲ ಪ್ರದೇಶಕ್ಕೆ ಹೋಗುವ ವೇಳೆ ರಾಹುಲ್ ಹರಿಯಾಣದ ಸೋನಿಪತ್‌ಗೆ ಭೇಟಿ ನೀಡಿ ರೈತರನ್ನು ಭೇಟಿಯಾಗಿ ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ.

ಇತ್ತೀಚೆಗೆ ಟ್ರಕ್ ಚಾಲಕರ ಸಮಸ್ಯೆಗಳನ್ನು ಅರಿತುಕೊಳ್ಳಲು ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.