ನವದೆಹಲಿ: ಕೇದಾರನಾಥ ದೇಗುಲದ ಬಳಿ ಸೋದರ ಸಹೋದರರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಬಿಜೆಪಿಯ ಸಂಸದ ವರುಣ್ಗಾಂಧಿ ಮಂಗಳವಾರ ಭೇಟಿಯಾದರು ಎಂದು ಮೂಲಗಳು ತಿಳಿಸಿವೆ.
ಈ ಭೇಟಿಯಲ್ಲಿ ಅವರು ರಾಜಕೀಯ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ವರುಣ್ ಗಾಂಧಿಯ ರಾಜಕೀಯ ಭವಿಷ್ಯದ ಬಗ್ಗೆ ಕೆಲವು ಊಹಾಪೋಹಗಳನ್ನು ಸೃಷ್ಟಿಸಿವೆ
ವರುಣ್ ಗಾಂಧಿ ಈಚೆಗೆ ಬಿಜೆಪಿಯ ಪ್ರಮುಖ ಸಭೆಗಳಿಂದ ದೂರ ಉಳಿದಿದ್ದಾರೆ. ಕೆಲವೊಂದು ಬಾರಿ ಪಕ್ಷದ ನಿಲುವಿಗೆ ವಿರುದ್ಧವಾದ ಹೇಳಿಕೆಗಳನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಅಲ್ಪ ಸಮಯದಲ್ಲೇ ವರುಣ್ ಮಗಳನ್ನೂ ಭೇಟಿಯಾದ ರಾಹುಲ್ ಭಾರಿ ಸಂತೋಷ ವ್ಯಕ್ತಪಡಿಸಿದರು.
ರಾಹುಲ್ಗಾಂಧಿ ಮೂರು ದಿನದಿಂದಲೂ ಕೇದಾರನಾಥದಲ್ಲಿದ್ದಾರೆ. ವರುಣ್ಗಾಂಧಿ ತಮ್ಮ ಕುಟುಂಬದೊಂದಿಗೆ ಶಿವನ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.