ನವದೆಹಲಿ: ‘ಭಾರತ ಜೋಡೊ’ ಯಾತ್ರೆ ಸಂದರ್ಭದಲ್ಲಿ ವೀರ ಸಾವರ್ಕರ್ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆಯು ಜನರ ನಡುವೆ ದ್ವೇಷ ಬಿತ್ತುವ ಉದ್ದೇಶದ ಪೂರ್ವಯೋಜಿತ ಕೃತ್ಯ ಎಂಬುದನ್ನು ತನಿಖೆಯು ಪುಷ್ಟೀಕರಿಸುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ರಾಹುಲ್ ಗಾಂಧಿ ಅವರ ವಿವಾದಾತ್ಮಕ ಹೇಳಿಕೆಯು ಅಪರಾಧ ಕೃತ್ಯಗಳ ವ್ಯಾಪ್ತಿಗೆ ಬರುತ್ತದೆ ಎಂದೂ ಅದು ತಿಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಮನಮೋಹನ್ ಅವರ ನೇತೃತ್ವದ ನ್ಯಾಯಪೀಠವು, ಮುಂದಿನ ಆದೇಶದವರೆಗೆ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡುವಂತಿಲ್ಲ ಎಂದು ಆದೇಶ ನೀಡಿತು.
ಸಾವರ್ಕರ್ ಅವರನ್ನು ‘ಬ್ರಿಟಿಷರ ಸೇವಕ’ ಎಂದು ರಾಹುಲ್ ಗಾಂಧಿ ಅವರು ಕರೆದಿದ್ದರು ಎಂದು ಕೋರ್ಟ್ ಮೆಟ್ಟಿಲೇರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.