ADVERTISEMENT

ಅಸಂಘಟಿತ ವಲಯಕ್ಕೆ ಮರಣದಂಡನೆಯಾದ ಹಠಾತ್ ಲಾಕ್‌ಡೌನ್‌: ರಾಹುಲ್ ಗಾಂಧಿ

ಏಜೆನ್ಸೀಸ್
Published 9 ಸೆಪ್ಟೆಂಬರ್ 2020, 7:19 IST
Last Updated 9 ಸೆಪ್ಟೆಂಬರ್ 2020, 7:19 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ದೇಶದಲ್ಲಿ ಜಾರಿಗೊಳಿಸಿದ ಹಠಾತ್ ಲಾಕ್‌ಡೌನ್ ಅಸಂಘಟಿತ ವಲಯದವರಿಗೆ ಮರಣದಂಡನೆಯಾಗಿ ಪರಿಣಮಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

‘21 ದಿನಗಳಲ್ಲಿ ಕೊರೊನಾವನ್ನು ಕೊನೆಗಾಣಿಸುವುದಾಗಿ ಭರವಸೆ ನೀಡಲಾಯಿತು. ಆದರೆ, ಈ ನಿರ್ಧಾರವು ಕೋಟ್ಯಂತರ ಉದ್ಯೋಗ, ಸಣ್ಣ ಉದ್ಯಮಗಳನ್ನು ಕೊನೆಗಾಣಿಸಿತು’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದ ಲಾಕ್‌ಡೌನ್ ಜನವಿರೋಧಿ ಎಂದೂ ಅವರು ಟೀಕಿಸಿದ್ದಾರೆ.

ADVERTISEMENT

ಕೇಂದ್ರದ ಎನ್‌ಡಿಎ ಸರ್ಕಾರವನ್ನು ಟೀಕಿಸಿ ಸರಣಿ ವಿಡಿಯೊ ಬಿಡುಗಡೆ ಮಾಡುತ್ತಿರುವ ಅವರು ನಾಲ್ಕನೇ ವಿಡಿಯೊವನ್ನು, ‘ಮೋದಿ ಸರ್ಕಾರ ಭಾರತದ ಆರ್ಥಿಕತೆಯನ್ನು ನಾಶ ಮಾಡಿದ್ದು ಹೇಗೆ’ ಎಂಬ ಶೀರ್ಷಿಕೆಯಡಿ ಬಿಡುಗಡೆ ಮಾಡಿದ್ದಾರೆ.

‘ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬಡ ಜನರು ದಿನಗೂಲಿ ಅವಲಂಬಿತರಾಗಿದ್ದಾರೆ. ಇವರ ಮೇಲೆ ಸರ್ಕಾರವು ಕೊರೊನಾ ವೈರಸ್ ಲಾಕ್‌ಡೌನ್‌ನೊಂದಿಗೆ ಪ್ರಹಾರ ನಡೆಸಿತು’ ಎಂದು ರಾಹುಲ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.