ರಾಹುಲ್ ಗಾಂಧಿ
(ಪಿಟಿಐ ಚಿತ್ರ)
ನವದೆಹಲಿ: ಕಾಂಗ್ರೆಸ್ನ ‘ಭಾರತ ಜೋಡೊ ನ್ಯಾಯ ಯಾತ್ರೆ’ ಸಮಾರೋಪ ಸಭೆಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನೀಡಿದ್ದ ‘ನಾವು ಶಕ್ತಿ ವಿರುದ್ಧ ಹೋರಾಡುತ್ತಿದ್ದೇವೆ’ ಎಂಬ ಹೇಳಿಕೆ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ಬುಧವಾರ ದೂರು ನೀಡಿದೆ.
ಕೇಂದ್ರ ಸಚಿವ ಹರ್ದೀಪ್ ಪುರಿ ಮತ್ತು ಪಕ್ಷದ ನಾಯಕ ಓಂ ಮಾಥುರ್ ಅವರು ಈ ದೂರು ನೀಡಿದ್ದಾರೆ. ಹಿಂದೂ ಧರ್ಮದಲ್ಲಿ ‘ದುರ್ಗಾ ಮಾತೆ’ಯನ್ನು ‘ಶಕ್ತಿ’ ಎಂದು ಕರೆಯಲಾಗುತ್ತದೆ. ರಾಹುಲ್ ಅವರು ‘ಶಕ್ತಿ’ ಕುರಿತು ಮುಂಬೈನಲ್ಲಿ ಭಾನುವಾರ ನೀಡಿದ ಹೇಳಿಕೆಯು ಹಿಂದೂ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.