ADVERTISEMENT

ವರುಣ್‌ ಸಿಂಗ್‌ಗೆ ಚಿಕಿತ್ಸೆ: ಭಾರತ ನಿಮ್ಮೊಂದಿಗಿದೆ ಶೀಘ್ರ ಗುಣಮುಖರಾಗಿ –ರಾಹುಲ್‌

ಹೆಲಿಕಾಪ್ಟರ್‌ ದುರಂತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಡಿಸೆಂಬರ್ 2021, 5:38 IST
Last Updated 15 ಡಿಸೆಂಬರ್ 2021, 5:38 IST
ಬೆಂಗಳೂರಿನ ಕಮಾಂಡೊ ಆಸ್ಪತ್ರೆ (ಒಳ ಚಿತ್ರದಲ್ಲಿ ಕ್ಯಾಪ್ಟನ್ ವರುಣ್ ಸಿಂಗ್)
ಬೆಂಗಳೂರಿನ ಕಮಾಂಡೊ ಆಸ್ಪತ್ರೆ (ಒಳ ಚಿತ್ರದಲ್ಲಿ ಕ್ಯಾಪ್ಟನ್ ವರುಣ್ ಸಿಂಗ್)   

ನವದೆಹಲಿ: ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಗ್ರೂ‍ಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಶೀಘ್ರ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಇಡೀ ದೇಶ ನಿಮ್ಮೊಂದಿಗೆ ನಿಂತಿದೆ’ ಎಂದು ಹೇಳಿದ್ದಾರೆ.

ಸದ್ಯ ವರುಣ್‌ ಸಿಂಗ್‌ ಅವರು ಬೆಂಗಳೂರಿನ ಕಮಾಂಡೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಮಿಳುನಾಡಿನ ಸೂಲೂರು ಎಂಬಲ್ಲಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್‌ ದುರಂತದಲ್ಲಿ ಸಿಡಿಎಸ್‌ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.