ADVERTISEMENT

ತಮಿಳುನಾಡಿನಲ್ಲಿ ‘ಜಲ್ಲಿಕಟ್ಟು’ ಕ್ರೀಡೆ ವೀಕ್ಷಿಸಿದ ರಾಹುಲ್‌ ಗಾಂಧಿ

ಪಿಟಿಐ
Published 14 ಜನವರಿ 2021, 8:17 IST
Last Updated 14 ಜನವರಿ 2021, 8:17 IST
ಎಂಕೆ ಸ್ಟಾಲಿನ್‌ ಪುತ್ರ ಉದಯನಿಧಿ‌ ಜೊತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ
ಎಂಕೆ ಸ್ಟಾಲಿನ್‌ ಪುತ್ರ ಉದಯನಿಧಿ‌ ಜೊತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ    

ಮಧುರೈ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮಿಳುನಾಡಿನ ಅವನಿಯಪುರಂನಲ್ಲಿ ‘ಜಲ್ಲಿಕಟ್ಟು’ ಕ್ರೀಡೆಯನ್ನು ಗುರುವಾರ ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಉಪಸ್ಥಿತರಿದ್ದರು.

ರಾಹುಲ್‌ ಗಾಂಧಿ ಗುರುವಾರಪೊಂಗಲ್‌ ಹಬ್ಬದ (ಮಕರ ಸಂಕ್ರಾತಿ) ಆಚರಣೆಗಾಗಿ ದೆಹಲಿಯಿಂದ ತಮಿಳುನಾಡಿಗೆ ಬಂದಿದ್ದಾರೆ.

ಪೊಂಗಲ್‌ ಹಬ್ಬದಂದು ಜಲ್ಲಿಕಟ್ಟು ಕ್ರೀಡೆಯನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್‌, ಟಿಎನ್‌ಸಿಸಿ ಮುಖ್ಯಸ್ಥ ಕೆ.ಸಿ ಅಳಗಿರಿ, ಪುದುಚೇರಿ ಮುಖ್ಯಮಂತ್ರಿ ವಿ.ನಾರಯಣಸ್ವಾಮಿ ಅವರು ಭಾಗವಹಿಸಿದ್ದರು.

ADVERTISEMENT

ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ ಕೂಡ ಜಲ್ಲಿಕಟ್ಟು ನಡೆಯುವ ಸ್ಥಳದಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ಪ್ರತ್ಯೇಕ ವೇದಿಕೆಯಲ್ಲಿದ್ದ ಉಭಯ ನಾಯಕರು, ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

ಈ ಬಾರಿಯ ತಮಿಳುನಾಡು ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್‌ ಮತ್ತು ಡಿಎಂಕೆ ಒಟ್ಟಿಗೆ ಎದುರಿಸಲಿವೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.