ADVERTISEMENT

ಮಹಾರಾಷ್ಟ್ರದ ಸಲಹೆಗೆ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 17:28 IST
Last Updated 3 ಆಗಸ್ಟ್ 2019, 17:28 IST
ಆಲಮಟ್ಟಿ ಜಲಾಶಯದಿಂದ ಶನಿವಾರ ಸಂಜೆ 2.58 ಲಕ್ಷ ಕ್ಯುಸೆಕ್‌ ನೀರನ್ನು 26 ಗೇಟ್‌ಗಳಿಂದ ನದಿ ತಳಪಾತ್ರಕ್ಕೆ ಹರಿಸುತ್ತಿದ್ದು, ಜಲಾಶಯದ ಗೇಟ್‌ಗಳಿಂದ ಭೋರ್ಗರೆಯುತ್ತಿರುವ ನೀರು ಕಂಡಿದ್ದು ಹೀಗೆ ಪ್ರಜಾವಾಣಿ ಚಿತ್ರ: ಚಂದ್ರಶೇಖರ ಕೋಳೇಕರ
ಆಲಮಟ್ಟಿ ಜಲಾಶಯದಿಂದ ಶನಿವಾರ ಸಂಜೆ 2.58 ಲಕ್ಷ ಕ್ಯುಸೆಕ್‌ ನೀರನ್ನು 26 ಗೇಟ್‌ಗಳಿಂದ ನದಿ ತಳಪಾತ್ರಕ್ಕೆ ಹರಿಸುತ್ತಿದ್ದು, ಜಲಾಶಯದ ಗೇಟ್‌ಗಳಿಂದ ಭೋರ್ಗರೆಯುತ್ತಿರುವ ನೀರು ಕಂಡಿದ್ದು ಹೀಗೆ ಪ್ರಜಾವಾಣಿ ಚಿತ್ರ: ಚಂದ್ರಶೇಖರ ಕೋಳೇಕರ   

ವಿಜಯಪುರ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹವನ್ನು 518 ಮೀಟರ್‌ಗೆ ಮಿತಿಗೊಳಿಸಬೇಕೆನ್ನುವ ಮಹಾರಾಷ್ಟ್ರ ಸರ್ಕಾರದ ಸಲಹೆಗೆ ಶಾಸಕ ಎಂ.ಬಿ.ಪಾಟೀಲ ಶನಿವಾರ ಇಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

‘ನೀರು ಸಂಗ್ರಹಿಸುವ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮೊದಲಿನಿಂದಲೂ ಗೊಂದಲ ಸೃಷ್ಟಿಸುತ್ತಾ ಬಂದಿದೆ. ನೀರು ಬಿಡುವಾಗ ಒಂದು ಮಾತು, ಪ್ರವಾಹ ಸಂದರ್ಭದಲ್ಲಿ ಮತ್ತೊಂದು ಹೇಳಿಕೆ ನೀಡುವುದು ಮಹಾರಾಷ್ಟ್ರದ ಚಾಳಿಯಾಗಿದೆ. ನಾವು ಎಷ್ಟು ನೀರು ಸಂಗ್ರಹಿಸಬೇಕು ಎಂದು ಹೇಳಲು ಅವರು ಯಾರು? ಜಲಾಶಯದ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲಿದ್ದೇವೆ’ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT