ಕಾಕಿನಾಡ: ‘ಅಸನಿ’ ಚಂಡಮಾರುತದ ಪ್ರಭಾವದಿಂದ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಹಲವೆಡೆ ಬುಧವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ.
ಚಂಡಮಾರುತವು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಿಂದ ಉತ್ತರ ಆಂಧ್ರ ಕರಾವಳಿಯತ್ತ ಚಲಿಸುತ್ತಿದೆ. ಬುಧವಾರ ಬೆಳಿಗ್ಗೆ ಹೊತ್ತಿಗೆ ಕಾಕಿನಾಡ ಪ್ರವೇಶಿಸಬಹುದು ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪ್ರದೀಪ್ ಕುಮಾರ ಜೆನಾ ಮಂಗಳವಾರ ತಿಳಿಸಿದ್ದರು ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳೂ ತಿಳಿಸಿದ್ದರು.
ತೆಲಂಗಾಣದ ನಲ್ಗೊಂಡಾ, ಸೂರ್ಯಪೇಟ್, ಭದ್ರಾದ್ರಿ, ಕೊಥಗುಡೆಂ, ಖಮ್ಮಮ್ ಹಾಗೂ ಮುಲುಗು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.