ADVERTISEMENT

‘ಮಹಾ’ ಗೃಹ ಸಚಿವರ ವಿರುದ್ಧ ಆರೋಪ: ಕೇಂದ್ರದ ಹಸ್ತಕ್ಷೇಪ ಅಗತ್ಯ ಎಂದ ರಾಜ್ ಠಾಕ್ರೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 19:44 IST
Last Updated 21 ಮಾರ್ಚ್ 2021, 19:44 IST
ರಾಜ್ ಠಾಕ್ರೆ
ರಾಜ್ ಠಾಕ್ರೆ   

ಮುಂಬೈ: ಕಳೆದ ತಿಂಗಳು ಉದ್ಯಮಿ ಮುಕೇಶ್‌ ಅಂಬಾನಿ ಅವರ ನಿವಾಸದ ಬಳಿ ಪತ್ತೆಯಾದ ಸ್ಫೋಟಕಗಳು ತುಂಬಿದ್ದ ವಾಹನದ ಹಿಂದಿನ ಸತ್ಯವನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರದ ಹಸ್ತಕ್ಷೇಪದ ಅಗತ್ಯವಿದೆ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ (ಎಂಎನ್‌ಎಸ್‌) ಮುಖ್ಯಸ್ಥ ರಾಜ್‌ ಠಾಕ್ರೆ ಹೇಳಿದ್ದಾರೆ.

ಈ ಪ್ರಕರಣದಲ್ಲಿನ ಕೆಲ ಮೂಲಭೂತ ಅಂಶಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಮಹಾರಾಷ್ಟ್ರ ಸರ್ಕಾರ ಅಸಮರ್ಥವಾಗಿದೆ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪ್ರಕರಣದಲ್ಲಿ ಸತ್ಯವನ್ನು ಹೊರಗೆ ತರಲು ಕೇಂದ್ರವು ಸಹಾಯ ಮಾಡಬೇಕು. ಸ್ಫೋಟಕಗಳಿಂದ ತುಂಬಿದ ವಾಹನವನ್ನು ಅಲ್ಲಿ ಯಾರು ಇರಿಸಿದರು ಮತ್ತು ಯಾರ ಸೂಚನೆಯ ಮೇರೆಗೆ ಇದನ್ನು ಮಾಡಲಾಯಿತು ಎಂಬುದನ್ನು ಪತ್ತೆ ಮಾಡಬೇಕಿದೆ ಎಂದರು. ಈ ಮೂಲ ಪ್ರಶ್ನೆಗಳನ್ನು ಮರೆಯಬಾರದು. ಇಲ್ಲದಿದ್ದರೆ ಈ ಪ್ರಕರಣವೂ ನಟ ಸುಶಾಂತ್ ಸಿಂಗ್ ರಜಪೂತ್ ಅವರ (ಸಾವು) ಪ್ರಕರಣದಂತೆಯೇ ಸಾಗುತ್ತದೆ ಎಂದು ಅವರು ಹೇಳಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.