ADVERTISEMENT

ರಾಜಸ್ಥಾನ: ಕಲ್ಯಾಣ್‌ ಸಿಂಗ್ ಗೌರವಾರ್ಥ ಎರಡು ದಿನ ಶೋಕಾಚರಣೆ

ಪಿಟಿಐ
Published 22 ಆಗಸ್ಟ್ 2021, 10:26 IST
Last Updated 22 ಆಗಸ್ಟ್ 2021, 10:26 IST
ಕಲ್ಯಾಣ್‌ ಸಿಂಗ್
ಕಲ್ಯಾಣ್‌ ಸಿಂಗ್   

ಜೈಪುರ:ಮಾಜಿ ರಾಜ್ಯಪಾಲ ಕಲ್ಯಾಣ್‌ ಸಿಂಗ್ ಅವರ ಗೌರವಾರ್ಥ ರಾಜ್ಯದ ಎಲ್ಲಾ ಕಚೇರಿಗಳು, ಸಾರ್ವಜನಿಕ ವಲಯದ ಉದ್ದಿಮೆಗಳು ಸೇರಿದಂತೆ ಎಲ್ಲಾ ಸಂಸ್ಥೆಗಳಿಗೆ ರಾಜಸ್ಥಾನ ಸರ್ಕಾರ ಸೋಮವಾರ (ಆ. 23) ರಜೆ ಘೋಷಿಸಿದೆ.

ಅವರ ಗೌರವಾರ್ಥ ರಾಜ್ಯದಲ್ಲಿ ಎರಡು ದಿನ ಶೋಕಾಚರಣೆಯನ್ನು ಘೋಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ಭಾನುವಾರ ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಸಂಸ್ಥೆಗಳ ಮೇಲೆ ಭಾನುವಾರ ಮತ್ತು ಸೋಮವಾರ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲಾಗುವುದು ಎಂದು ಇವೇ ಮೂಲಗಳು ಹೇಳಿವೆ.

ADVERTISEMENT

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಲ್ಯಾಣ್‌ ಸಿಂಗ್ ಅವರು ಲಖನೌನಲ್ಲಿರುವ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಅವರ ಅಂತ್ಯಕ್ರಿಯೆ ಆ. 23ರಂದು ನೆರವೇರಲಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.