ADVERTISEMENT

ರಾಜಸ್ಥಾನ ಸಂಪುಟ ವಿಸ್ತರಣೆ

ಸಿ.ಪಿ. ಜೋಷಿ ಸೇರಿ ಹಿರಿಯರಿಗೆ ನಿರಾಸೆ

ಪಿಟಿಐ
Published 24 ಡಿಸೆಂಬರ್ 2018, 19:12 IST
Last Updated 24 ಡಿಸೆಂಬರ್ 2018, 19:12 IST

ಜೈಪುರ್‌: ರಾಜಸ್ಥಾನದ ಕಾಂಗ್ರೆಸ್‌ ಸರ್ಕಾರದ ಸಂಪುಟ ವಿಸ್ತರಣೆ ಸೋಮವಾರ ನಡೆದಿದ್ದು, 23 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಾಮಾಜಿಕ ನ್ಯಾಯ ತತ್ವದ ಅಡಿ ಎಲ್ಲ ಜಾತಿ, ಜನಾಂಗದ ಶಾಸಕರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದೆ. ಆ ಮೂಲಕ ಕಾಂಗ್ರೆಸ್‌ ಲೋಕಸಭೆ ಚುನಾವಣೆ ತಯಾರಿಗೆ ವೇದಿಕೆ ಸಿದ್ಧಪಡಿಸಿಕೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

ಹೊಸಬರಿಗೆ ಮಣೆ ಹಾಕಲಾಗಿದ್ದು 17 ಮಂದಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಅವಕಾಶ ಕಲ್ಪಿಸಲಾಗಿದೆ. ಸಿ.ಪಿ.ಜೋಷಿ, ಹೇಮರಾಮ್‌ ಚೌಧರಿ ಸೇರಿದಂತೆ ಕೆಲವು ಪ್ರಮುಖ ನಾಯಕರಿಗೆ ಸಚಿವ ಸ್ಥಾನ ನೀಡಿಲ್ಲ. ಕಾಂಗ್ರೆಸ್‌ ಮೈತ್ರಿಯ ಪಾಲುದಾರ ಪಕ್ಷ ರಾಷ್ಟ್ರೀಯ ಲೋಕ ದಳದ ಶಾಸಕರೊಬ್ಬರಿಗೂ ಸಚಿವ ಸ್ಥಾನ ನೀಡಲಾಗಿದೆ. ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.