ಜೈಪುರ: ರಾಜಸ್ಥಾನದ ಕೋಟಾ ಜಿಲ್ಲೆ ವ್ಯಾಪ್ತಿಯ ಚಂಬಲ್ ನದಿಗೆ ಭಾನುವಾರ ಸೇತುವೆ ಮೇಲಿನಿಂದ ಕಾರು ಬಿದ್ದಿದ್ದು, ಎಂಟು ಮಂದಿ ಸ್ಥಳದಲ್ಲೇಮೃತಪಟ್ಟಿದ್ದಾರೆ.
ಮೃತರು ಕೋಟಾದಿಂದ ಉಜ್ಜಯಿನಿಗೆ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು ಎಂದು ವರದಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಯಿಂದ ನೇರವಾಗಿ ನದಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲಾ ಎಂಟು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಕೋಟಾ ಎಸ್ಪಿ ಕೇಸರ್ ಸಿಂಗ್ ಶೇಖಾವತ್ ತಿಳಿಸಿದ್ದಾರೆ.
ಕ್ರೇನ್ ಸಹಾಯದಿಂದ ಕಾರನ್ನು ನದಿಯಿಂದ ಹೊರತೆಗೆಯಲಾಗಿದೆ. ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.