ADVERTISEMENT

ರಾಜಸ್ಥಾನ: ಗುಂಡು ಹಾರಿಸಿ ಗ್ಯಾಂಗ್‌ಸ್ಟರ್‌ ಹತ್ಯೆ

ಪಿಟಿಐ
Published 3 ಡಿಸೆಂಬರ್ 2022, 11:05 IST
Last Updated 3 ಡಿಸೆಂಬರ್ 2022, 11:05 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಸಿಕರ್‌: ರಾಜಸ್ಥಾನದ ಸಿಕರ್‌ ಜಿಲ್ಲೆಯಲ್ಲಿ ಗ್ಯಾಂಗ್‌ಸ್ಟರ್‌ ರಾಜು ಥೇತ್‌ ಎಂಬಾತನನ್ನು ನಾಲ್ವರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉದ್ಯೋಗ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಪ್ರಾಲಿ ರಸ್ತೆಯಲ್ಲಿರುವ ತನ್ನ ಮನೆಯ ಗೇಟ್‌ ಬಳಿ ನಿಂತಿದ್ದಾಗ ರಾಜು ಮೇಲೆ ಗುಂಡಿನ ದಾಳಿ ನಡೆದಿದೆ ಎಂದೂ ಹೇಳಿದ್ದಾರೆ.

ರಾಜು ಥೇತ್‌ ಹಲವರು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಜಾಮೀನು ಪಡೆದು ಹೊರಬಂದಿದ್ದ. 2017ರಲ್ಲಿ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ ಗ್ಯಾಂಗ್‌ಸ್ಟರ್‌ ಆನಂದ್‌ಪಾಲ್‌ ಸಿಂಗ್‌ನ ಪ್ರತಿಸ್ಪರ್ಧಿ ಗುಂಪಿನಲ್ಲಿ ಈತ ಗುರುತಿಸಿಕೊಂಡಿದ್ದ ಎಂದೂ ಹೇಳಿದ್ದಾರೆ.

ADVERTISEMENT

ಲಾರೆನ್ಸ್‌ ಬಿಷ್ಣೋಯ್‌ ತಂಡದವನೆಂದು ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿರುವ ರೋಹಿತ್‌ ಗೋದಾರ ಎಂಬಾತ ಈ ಕೃತ್ಯದ ಹೊಣೆ ಹೊತ್ತುಕೊಂಡಿದ್ದಾನೆ. ಆನಂದ್‌ಪಾಲ್‌ ಸಿಂಗ್‌ ಮತ್ತು ಬಲ್ಬೀರ್ ಬಾನುಡಾ ಅವರ ಹತ್ಯೆಗೆ ಪ್ರತೀಕಾರವಾಗಿ ಈ ಕೃತ್ಯ ಎಸಗಿರುವುದಾಗಿಯೂ ಆತ ಹೇಳಿಕೊಂಡಿದ್ದಾನೆ. ಆನಂದ್‌ಪಾಲ್‌ ಸಿಂಗ್‌ ತಂಡದ ಸದಸ್ಯನಾಗಿದ್ದ ಬಲ್ಬೀರ್ ಬಾನುಡಾ 2014ರಲ್ಲಿ ಬಿಕಾನೇರ್‌ ಜೈಲಿನಲ್ಲಿ ನಡೆದಿದ್ದ ಗ್ಯಾಂಗ್‌ ವಾರ್‌ನಲ್ಲಿ ಹತ್ಯೆಗೀಡಾಗಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.