ADVERTISEMENT

ದೀಪಾವಳಿ: ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ಸರ್ಕಾರ ನಿರ್ಧಾರ

ಪಿಟಿಐ
Published 2 ನವೆಂಬರ್ 2020, 6:36 IST
Last Updated 2 ನವೆಂಬರ್ 2020, 6:36 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ಜೈಪುರ: ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಈ ಬಾರಿ ಹಬ್ಬದ ಅವಧಿಯಲ್ಲಿ ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.

ಈ ಸವಾಲಿನ ಸಮಯದಲ್ಲಿ ಜನರ ಜೀವ ಉಳಿಸುವುದು ಸರ್ಕಾರಕ್ಕೆ ಬಹು ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಶಾಲೆ ಮತ್ತು ಕಾಲೇಜುಗಳನ್ನು ನವೆಂಬರ್ 16ರ ವರೆಗೂ ತೆರೆಯದೇ ಇರಲು ನಿರ್ಧರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ADVERTISEMENT

ಕೊರೊನಾ ವೈರಸ್ ಬಿಕ್ಕಟ್ಟು, ‘ನೊ ಮಾಸ್ಕ್–ನೊ ಎಂಟ್ರಿ’ ಮತ್ತು ‘ವಾರ್ ಫಾರ್ ದಿ ಪ್ಯೂರ್’ ಅಭಿಯಾನಗಳ ಕುರಿತು ಅವರು ಪರಾಮರ್ಶೆ ನಡೆಸಿದ್ದಾರೆ. ‘ಅನ್‌ಲಾಕ್–6’ರ ಮಾರ್ಗಸೂಚಿ ಬಗ್ಗೆಯೂ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಪಟಾಕಿ ಮಾರಾಟ ಮತ್ತು ಫಿಟ್‌ನೆಸ್ ಪ್ರಮಾಣಪತ್ರವಿಲ್ಲದೆ ಸಂಚರಿಸುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇಂಥ ಸಂದರ್ಭದಲ್ಲಿ ಜನರು ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಬಾರದು ಎಂದು ಗೆಹ್ಲೋಟ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.