ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಸೇನಾ ಯೋಧರೊಂದಿಗೆ ಇಂದು ದಸರಾ ಹಬ್ಬವನ್ನು ಆಚರಿಸಿದ್ದಾರೆ.
ರಕ್ಷಣಾ ಸಚಿವರು 'ಶಸ್ತ್ರ' ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಕಳೆದ ಕೆಲವು ವರ್ಷಗಳಲ್ಲಿ ಪೂರ್ವ ಲಡಾಕ್ನಲ್ಲಿ ಭಾರತ ಹಾಗೂ ಚೀನಾ ನಡುವೆ ಸಂಘರ್ಷ ಏರ್ಪಟ್ಟಿರುವಂತೆಯೇ ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಸಮೀಪದ ಸೇನಾ ನೆಲೆಯಲ್ಲಿ ರಾಜನಾಥ ಸಿಂಗ್ ಸೈನಿಕರೊಂದಿಗೆ ದಸರಾ ಹಬ್ಬ ಆಚರಿಸಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ರಾಜನಾಥ ಸಿಂಗ್ ಅವರು, ಹಿಂದಿನ ಎನ್ಡಿಎ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗಲೂ ಸೇರಿದಂತೆ ಕಳೆದ ಹಲವು ವರ್ಷಗಳಿಂದ ದಸರಾ ಸಂದರ್ಭದಲ್ಲಿ ಇಲ್ಲಿಗೆ ಬಂದು ಶಸ್ತ್ರ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.