ADVERTISEMENT

ಶಾಂಘೈ ಸಹಕಾರ ಸಮಾವೇಶ: ದುಶಾಂಬೆಗೆ ರಾಜನಾಥ್ ಸಿಂಗ್

ತಜಕಿಸ್ತಾನಕ್ಕೆ ರಕ್ಷಣಾ ಸಚಿವರ ಮೂರು ದಿನಗಳ ಪ್ರವಾಸ

ಪಿಟಿಐ
Published 27 ಜುಲೈ 2021, 13:26 IST
Last Updated 27 ಜುಲೈ 2021, 13:26 IST
ರಾಜನಾಥ ಸಿಂಗ್
ರಾಜನಾಥ ಸಿಂಗ್   

ನವದೆಹಲಿ: ತಜಕಿಸ್ತಾನದ ದುಶಾಂಬೆಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ತಜಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.

ಸಮಾವೇಶದಲ್ಲಿ ಭಯೋತ್ಪಾದನೆ ಮತ್ತು ಇತರ ಭದ್ರತಾ ಸವಾಲುಗಳನ್ನು ಎದುರಿಸುವ ಬಗೆಯ ಕುರಿತು ಚರ್ಚಿಸಲು ಎಸ್‌ಸಿಒನ ಎಂಟು ಸದಸ್ಯ ರಾಷ್ಟ್ರಗಳು ಪಾಲ್ಗೊಳ್ಳಲಿವೆ.

‘ಜುಲೈ 29ರವರೆಗೆ ಸಮಾವೇಶ ನಡೆಯಲಿದ್ದು,ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಅವರೊಂದಿಗೂ ರಾಜನಾಥ್‌ ಸಿಂಗ್‌ ಮಾತುಕತೆ ನಡೆಸಲಿದ್ದಾರೆಯೇ ಎಂಬುದು ಖಚಿತವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.