ADVERTISEMENT

ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ 'ಗಮನಾರ್ಹ': ರಾಜನಾಥ್ ಸಿಂಗ್

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 12:18 IST
Last Updated 12 ಏಪ್ರಿಲ್ 2024, 12:18 IST
ರಾಜನಾಥ್ ಸಿಂಗ್,ರಕ್ಷಣಾ ಸಚಿವ  
ರಾಜನಾಥ್ ಸಿಂಗ್,ರಕ್ಷಣಾ ಸಚಿವ     

ರೇವಾ/ಮಧ್ಯಪ್ರದೇಶ: ಮಧ್ಯಪ್ರದೇಶದ ಬಿಜೆಪಿ ಪ್ರಚಾರ ರ‍್ಯಾಲಿಯಲ್ಲಿ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್  'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆ ಪರ ಮಾತನಾಡಿದ್ದು,  ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಕಾರ್ಯಯೋಜನೆಗಳು ದೇಶಕ್ಕೆ 'ಗಮನಾರ್ಹವಾದದ್ದು’, ಎಂದು ಕರೆದಿದ್ದಾರೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಬಳಿಕ ದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬೇಕು ಆದರೆ ಇದನ್ನು ಎರಡು ಬ್ಯಾಚ್‌ಗಳಲ್ಲಿ ನಡೆಸಬೇಕು ಎಂದು ಸಿಂಗ್ ಹೇಳಿದರು.

ಕೇಂದ್ರದ ಮೋದಿ ಸರ್ಕಾರದ ಕಾರ್ಯಗಳನ್ನು ಹೇಳುತ್ತಾ, 2026 ರ ವೇಳೆಗೆ, ಭಾರತದ ಆರ್ಥಿಕತೆಯು ವಿಶ್ವದ ಮೂರನೇ ಸ್ಥಾನದಲ್ಲಿರಲಿದೆ ಮತ್ತು 2047 ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. 2070  ಸಮೀಪಿಸುತ್ತಿರುವಾಗ, ಇದು ವಿಶ್ವದ ಅತಿದೊಡ್ಡ ಶಕ್ತಿಯಾಗಲಿದೆ ಎಂದು ರಕ್ಷಣಾ ಸಚಿವರು ಹೇಳಿದರು.

ADVERTISEMENT

ಮೋದಿಯವರ ಅಧಿಕಾರಾವಧಿಯಲ್ಲಿ ವಿಶ್ವದಲ್ಲಿ ರಾಷ್ಟ್ರದ ಸ್ಥಾನಮಾನ ಹೆಚ್ಚಿದೆ. ಷ್ಯಾ-ಉಕ್ರೇನ್ ಯುದ್ಧದ ಸಮಯದಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ನಿರ್ಗಮಿಸಲು ಪ್ರಧಾನಿ ಮೋದಿಯವರ ಮಧ್ಯಸ್ಥಿಕೆಯಿಂದ ಯುದ್ಧವನ್ನು ನಾಲ್ಕೂವರೆ ಗಂಟೆಗಳ ಕಾಲ ನಿಲ್ಲಿಸಲಾಯಿತು ಎಂದು ಅವರು ಹೇಳಿದರು.

ಕತಾರ್‌ನೊಂದಿಗೆ ಭಾರತದ ರಾಜತಾಂತ್ರಿಕ ಗೆಲುವನ್ನು ಉಲ್ಲೇಖಿಸಿದ ಅವರು, ಅಲ್ಲಿನ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ಮೋದಿ ಅವರ ಮಾತುಕತೆ ನಂತರ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ಮೋದಿಯವರ ನಾಯಕತ್ವದಲ್ಲಿ ಭಾರತವು ವಿಶ್ವದ ಪ್ರಮುಖ ಶಕ್ತಿಯಾಗಿದೆ  ಮತ್ತು ಮಿಲಿಟರಿ ದೃಷ್ಟಿಯಿಂದಲೂ ದೇಶವು ಯುದ್ಧವಿಮಾನಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ತಯಾರಿಸುವುದು ಮಾತ್ರವಲ್ಲದೆ ಇತರ ದೇಶಗಳಿಗೆ ರಫ್ತು ಮಾಡುತ್ತಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.