ADVERTISEMENT

ವಿರೋಧ ಪಕ್ಷಗಳ ಗದ್ದಲ: ರಾಜ್ಯಸಭಾ ಕಲಾಪ ಮುಂದೂಡಿಕೆ

ಪಿಟಿಐ
Published 20 ಜುಲೈ 2021, 6:57 IST
Last Updated 20 ಜುಲೈ 2021, 6:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮುಂಗಾರು ಅಧಿವೇಶನದ ಎರಡನೇ ದಿನವಾದ ಮಂಗಳವಾರ ‘ಪೆಗಾಸಸ್ ಗೂಢಾಚಾರಿಕೆ‘ ವಿವಾದ ಸೇರಿದಂತೆ ವಿವಿಧ ವಿಷಯಗಳ ಚರ್ಚೆಗೆವಿರೋಧ ಪಕ್ಷಗಳು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಂಸತ್ತಿನ ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.

ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳ ಸದಸ್ಯರು,ಎಲ್ಲ ವಿಷಯಗಳನ್ನು ಬದಿಗಿಟ್ಟು, ನಾವು ನಿಯಮ 267 ರ ಅಡಿಯಲ್ಲಿ ಸಲ್ಲಿಸಿರುವ ವಿಷಯಗಳನ್ನೇ ಚರ್ಚೆಗೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ನಂತರ ಈ ವಿಚಾರವಾಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ತೀವ್ರ ಗದ್ದಲದ ವಾತಾವರಣ ಸೃಷ್ಟಿಯಾದ ಕಾರಣ ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು ಅವರು ಕಲಾಪವನ್ನು ಮಧ್ಯಾಹ್ನ 12ವರೆಗೆ ಮುಂದೂಡಿದರು.

ಇದಕ್ಕೂ ಮುನ್ನ ವಿರೋಧ ಪಕ್ಷದ ಸದಸ್ಯರು ನಿಯಮ 267ರ ಅಡಿಯಲ್ಲಿ ಪೆಗಾಸಸ್‌ ಗೂಢಚಾರಿಕೆ, ನೂತನ ವಿವಾದಾತ್ಮಕ ಕೃಷಿ ಕಾಯ್ದೆಗಳು ಮತ್ತು ತೈಲ ಬೆಲೆ ಏರಿಕೆ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.