ನವದೆಹಲಿ: ರಾಜ್ಯಸಭೆಯ 13 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಎಪಿ ಹಾಗೂ ಬಿಜೆಪಿ ತಲಾ ಐದು ಸ್ಥಾನಗಳನ್ನು ಗೆದ್ದುಕೊಂಡಿವೆ. ಎಡರಂಗದಿಂದ ಇಬ್ಬರು ಸದಸ್ಯರು ಆಯ್ಕೆಯಾಗಿದ್ದಾರೆ, ಒಂದು ಸ್ಥಾನ ಪಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ.
ಆಮ್ ಆದ್ಮಿ ಪಕ್ಷವು ಪಂಜಾಬ್ನಿಂದ ಐದು ಸ್ಥಾನಗಳನ್ನು ಗೆದ್ದುಕೊಂಡಿದೆ.
ಅಸ್ಸಾಂನಲ್ಲಿ ಬಿಜೆಪಿಗೆ ಎರಡು ಸ್ಥಾನಗಳು ದೊರೆತಿದ್ದು, ತ್ರಿಪುರಾ, ಹಿಮಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಲ್ಲಿ ತಲಾ ಒಬ್ಬರು ಆಯ್ಕೆಯಾಗಿದ್ದಾರೆ.
ಕೇರಳದ ಮೂರು ಸ್ಥಾನಗಳಲ್ಲಿ ಎಡರಂಗಕ್ಕೆ ಎರಡು ಹಾಗೂ ಕಾಂಗ್ರೆಸ್ ಒಂದು ಸ್ಥಾನ ದೊರಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.