ADVERTISEMENT

ಎಂಎಸ್‌ಪಿ ಖಾತರಿಗೆ ಕಾನೂನು ತರಲು ರಾಕೇಶ್ ಟಿಕಾಯತ್‌ ಆಗ್ರಹ

ಪಿಟಿಐ
Published 28 ನವೆಂಬರ್ 2021, 11:15 IST
Last Updated 28 ನವೆಂಬರ್ 2021, 11:15 IST
ರಾಕೇಶ್‌ ಟಿಕಾಯತ್‌
ರಾಕೇಶ್‌ ಟಿಕಾಯತ್‌   

ಮುಂಬೈ: ದೇಶದ ರೈತರ ಹಿತ ಕಾಯಲು ಕೇಂದ್ರ ಸರ್ಕಾರ ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಸಂಬಂಧ ಕಾನೂನು ತರಬೇಕು ಎಂದು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಭಾನುವಾರ ಆಗ್ರಹಿಸಿದರು.

ಮುಂಬೈನ ಆಜಾದ್‌ ಮೈದಾನದಲ್ಲಿ ಭಾನುವಾರ ನಡೆದ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಆಗಿದ್ದಾಗ ಎಂಎಸ್‌ಪಿಯ ಬೆಂಬಲಿಗರಾಗಿದ್ದರು. ಗುಜರಾತ್‌ ಮತ್ತು ರೈತರ ಹಿತಕ್ಕಾಗಿ ದೇಶದಾದ್ಯಂತ ಎಂಎಸ್‌ಪಿ ಖಾತರಿಪಡುಸವ ಕಾನೂನು ಜಾರಿಗೊಳಿಸಬೇಕು ಎಂದು ಅವರು ಬಯಸಿದ್ದರು ಎಂಬುದಾಗಿ ಟಿಕಾಯತ್‌ ಹೇಳಿದರು.

ADVERTISEMENT

ಆದರೆ, ಈಗ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ವಿಷಯದ ಚರ್ಚೆಯಿಂದ ದೂರ ಓಡುತ್ತಿದೆ ಎಂದು ಅವರು ದೂರಿದರು.

ಕೃಷಿ ಮತ್ತು ಕಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಬಗ್ಗೆಯೂ ಕೇಂದ್ರ ಸರ್ಕಾರ ಗಮನ ಹರಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ದೇಶದಾದ್ಯಂತ ಸಂಚರಿಸುವುದಾಗಿ ಅವರು ಹೇಳಿದರು.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ವರ್ಷವಿಡೀ ನಡೆದ ಪ್ರತಿಭಟನಾ ಆಂದೋಲನದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಟಿಕಾಯತ್ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.