ADVERTISEMENT

ನವಜೋತ್ ಸಿಂಗ್‌ ಸಿಧು ಪಂಜಾಬ್‌ ರಾಜಕಾರಣದ ರಾಖಿ ಸಾವಂತ್‌: ಎಎಪಿ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಸೆಪ್ಟೆಂಬರ್ 2021, 11:21 IST
Last Updated 17 ಸೆಪ್ಟೆಂಬರ್ 2021, 11:21 IST
ನವಜೋತ್ ಸಿಂಗ್‌ ಸಿಧು
ನವಜೋತ್ ಸಿಂಗ್‌ ಸಿಧು    

ಹೊಸದಿಲ್ಲಿ: ಪಂಜಾಬ್‌ನ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್‌ ಸಿಧು ವಿರುದ್ಧ ಎಎಪಿ ಮುಖಂಡ ರಾಘವ್‌ ಚಡ್ಡಾ ವಾಗ್ದಾಳಿ ನಡೆಸಿದ್ದಾರೆ.

ನವಜೋತ್ ಸಿಂಗ್‌ ಸಿಧು ಪಂಜಾಬ್‌ ರಾಜಕಾರಣದ ರಾಖಿ ಸಾವಂತ್‌ ಎಂದು ರಾಘವ್‌ ಚಡ್ಡಾ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಶುಕ್ರವಾರ ಟ್ವೀಟ್‌ ಮಾಡಿರುವ ಅವರು, 'ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರ ವಾಗ್ದಾಳಿ ನಡೆಸುವ ಸಿಧು ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ. ಆದ್ದರಿಂದ, ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸಿಧು ಪಂಜಾಬ್ ರಾಜಕೀಯದ ರಾಖಿ ಸಾವಂತ್' ಎಂದು ಚಡ್ಡಾ ಟ್ವೀಟ್ ಮಾಡಿದ್ದಾರೆ.

ADVERTISEMENT

'ನಾಳೆಯವರೆಗೆ ಕಾಯಿರಿ, ಸಿಧು ಅವರು ಮತ್ತೆ ಕ್ಯಾಪ್ಟನ್ ವಿರುದ್ಧ ಹೇಳಿಕೆ ನೀಡುವುದನ್ನು ಪುನರಾರಂಭಿಸುತ್ತಾರೆ' ಎಂದು ಚಡ್ಡಾ ತಿಳಿಸಿದ್ದಾರೆ.

ಕೇಂದ್ರದ ಕೃಷಿ ಕಾನೂನುಗಳಿಗೆ ಸಮ್ಮತಿ ಸೂಚಿಸುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರೈತರ ಶೋಷಣೆ ನಡೆಸಲು ಮುಂದಾಗಿದ್ದಾರೆ ಎಂದು ಸಿಧು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.