ADVERTISEMENT

ರಕ್ತದಾನ ಅಮೃತ ಮಹೋತ್ಸವಕ್ಕೆ ನೋಂದಣಿ ಆರಂಭ

ಪಿಟಿಐ
Published 6 ಸೆಪ್ಟೆಂಬರ್ 2022, 12:22 IST
Last Updated 6 ಸೆಪ್ಟೆಂಬರ್ 2022, 12:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ರಕ್ತದಾನ ಅಮೃತ ಮಹೋತ್ಸವ’ ಅಭಿಯಾನಕ್ಕಾಗಿ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಆರೋಗ್ಯ ಸೇತು ಆ್ಯಪ್‌ ಮೂಲಕ ಜನರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಸೆಪ್ಟೆಂಬರ್‌ 17ಕ್ಕೆ ಒಂದು ಲಕ್ಷ ಯುನಿಟ್‌ ರಕ್ತವನ್ನು ಸಂಗ್ರಹಿಸುವ ದೊಡ್ಡ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಅಂಗವಾಗಿ ಈ ಅಭಿಯಾನ ಕೈಗೊಳ್ಳಲಾಗಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನವೂ ಆಗಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಈ ಸಂಬಂಧಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಂಗಳವಾರ ಪತ್ರ ಬರೆದಿದೆ. ಈ ಅಭಿಯಾನವು ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನ (ಅ.1) ವರೆಗೆ ಮುಂದುವರೆಯಲಿದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳಲ್ಲಿ ಅಭಿಯಾನದ ಕುರಿತು ಜಾಗೃತಿ ಮೂಡಿಸಬೇಕು ಎಂದೂ ಸಚಿವಾಲಯ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.