
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರಲ್ಲಿ ಮಂಗಳವಾರ ದ್ವಜಾರೋಹಣ ನೆರವೇರಿಸಲಿದ್ದಾರೆ.
ರಾಮಮಂದಿರದ ಕಾರ್ಮಗಾರಿಗಳು ಪೂರ್ಣಗೊಂಡಿರುವುದರ ದ್ಯೋತಕವಾಗಿ ಧ್ವಜಾರೋಹಣ ನೆರವೇರಲಿದೆ.
‘ಹತ್ತು ಅಡಿ ಎತ್ತರ ಮತ್ತು 20 ಅಡಿ ಅಗಲವಿರುವ ತ್ರಿಕೋನಾಕೃತಿಯ ಧ್ವಜವು ಭಗವಾನ್ ರಾಮನ ಶೌರ್ಯ ಹಾಗೂ ಶಕ್ತಿಯನ್ನು ಬಿಂಬಿಸುವ ಪ್ರಕಾಶಮಾನ ಸೂರ್ಯನ ಚಿತ್ರವನ್ನು ಹೊಂದಿರಲಿದೆ. ಕೋವಿದಾರ ಮರದೊಂದಿಗೆ ‘ಓಂ’ ಅನ್ನು ಚಿತ್ರಿಸಲಾಗಿದೆ’ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
‘ಮಹರ್ಷಿಗಳಾದ ವಸಿಷ್ಠ, ವಿಶ್ವಾಮಿತ್ರ, ಅಗಸ್ತ್ಯ, ವಾಲ್ಮಿಕಿ, ದೇವಿ ಅಹಲ್ಯಾ, ನಿಶಾದ್ರಜ ಗುಹಾ ಮತ್ತು ಮಾತೆ ಶಬರಿಯ ದೇಗುಲಗಳಿಗೆ, ಶೇಷಾವತಾರ ಮತ್ತು ಅನ್ನಪೂರ್ಣ ಮಂದಿರಗಳಿಗೆ ಮೋದಿ ಭೇಟಿ ನೀಡಲಿದ್ದಾರೆ. ಬಳಿಕ ರಾಮದರ್ಬಾರ್ ಗರ್ಭಗುಡಿಯಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.
ಮಧ್ಯಾಹ್ನದ ವೇಳೆಗೆ ಶ್ರೀರಾಮಮಂದಿರ ‘ಶಿಖರ’ ಭಾಗದಲ್ಲಿ ಕೇಸರಿ ಧ್ವಜವನ್ನು ಶಾಸ್ತ್ರೋಕ್ತವಾಗಿ ಹಾರಿಸಿದ ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ.
‘ಮಹರ್ಷಿಗಳಾದ ವಸಿಷ್ಠ, ವಿಶ್ವಾಮಿತ್ರ, ಅಗಸ್ತ್ಯ, ವಾಲ್ಮಿಕಿ, ದೇವಿ ಅಹಲ್ಯಾ, ನಿಶಾದ್ರಜ ಗುಹಾ ಮತ್ತು ಮಾತೆ ಶಬರಿಯ ದೇಗುಲಗಳಿಗೆ, ಶೇಷಾವತಾರ ಮತ್ತು ಅನ್ನಪೂರ್ಣ ಮಂದಿರಗಳಿಗೆ ಮೋದಿ ಭೇಟಿ ನೀಡಲಿದ್ದಾರೆ. ಬಳಿಕ ರಾಮದರ್ಬಾರ್ ಗರ್ಭಗುಡಿಯಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.
ಮಧ್ಯಾಹ್ನದ ವೇಳೆಗೆ ಶ್ರೀರಾಮಮಂದಿರ ‘ಶಿಖರ’ ಭಾಗದಲ್ಲಿ ಕೇಸರಿ ಧ್ವಜವನ್ನು ಶಾಸ್ತ್ರೋಕ್ತವಾಗಿ ಹಾರಿಸಿದ ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.