ಲಖನೌ: ಅಯೋಧ್ಯೆಯಲ್ಲಿ ಭಾನುವಾರ ನಡೆಯಲಿರುವ ರಾಮಭಕ್ತರ ಧರ್ಮಸಭೆಯಲ್ಲಿ ರಾಮಮಂದಿರ ನಿರ್ಮಾಣ ದಿನಾಂಕವನ್ನು ಘೋಷಿಸುವ ಸುಳಿವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನೀಡಿದೆ.
ಧರ್ಮಸಭೆಗೆ ಜನರನ್ನು ಆಹ್ವಾನಿಸಲು ಅಯೋಧ್ಯೆ ಸುತ್ತಮುತ್ತ ಸಭೆಗಳನ್ನು ನಡೆಸುತ್ತಿರುವ ವಿಎಚ್ಪಿ ನಾಯಕರು ಸೋಮವಾರ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಧರ್ಮಸಭೆಯಲ್ಲಿ ಭಾಗವಹಿಸಲಿರುವ ಸಾಧು, ಸಂತರು ರಾಮಮಂದಿರ ನಿರ್ಮಾಣ ದಿನವನ್ನು ಘೋಷಿಸಲಿದ್ದಾರೆ. ಇದೊಂದು ನಿರ್ಣಾಯಕ ಯುದ್ಧ ಎಂದು ಅವರು ಹೇಳುತ್ತಿದ್ದಾರೆ.
ಬಿಜೆಪಿ ನಾಯಕರು ಧರ್ಮಸಭೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಲು ಪಕ್ಷದ ಅಭ್ಯಂತರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಮಜನ್ಮಭೂಮಿ–ಬಾಬ್ರಿ ಮಸೀದಿ ವಿವಾದಿತ ಜಾಗದಲ್ಲಿ ಯಥಾಸ್ಥಿತಿ ಕಾಪಾಡುವ ಹೊಣೆ ಹೊತ್ತಿರುವ ಜಿಲ್ಲಾಡಳಿತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.