ಡೆಹ್ರಾಡೂನ್: ‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಹೇಳಿದ್ದಾರೆ.
‘ಬಿಜೆಪಿಯವರಿಗೆ ನೈತಿಕತೆ ಎಂಬುದೇ ಇಲ್ಲ.ನೈತಿಕತೆ ಮತ್ತು ಘನತೆ– ಗೌರವವನ್ನು ಪಾಲಿಸದವರು ರಾಮನ ಭಕ್ತರಾಗಿರಲು ಸಾಧ್ಯವಿಲ್ಲ. ನೈತಿಕತೆ ಹಾಗೂ ಸಂವಿಧಾನದ ಮೇಲೆ ನಮಗೆ ನಂಬಿಕೆ ಇದೆ. ಹೀಗಾಗಿ ನಾವು ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ ಖಚಿತ’ ಎಂದು ಅವರು ಪತ್ರಕರ್ತರಿಗೆ ತಿಳಿಸಿದರು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ರಾವತ್, ‘ವಿರೋಧ ಪಕ್ಷಗಳನ್ನು ಅಧಿಕಾರದಿಂದ ಹೇಗಾದರೂ ಮಾಡಿ ಕೆಳಗಿಸುವುದು ಬಿಜೆಪಿ ಉದ್ದೇಶ’ ಎಂದು ಆರೋಪಿಸಿದರು.
* ಇವನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.