ADVERTISEMENT

ಪುದಚೇರಿ: ನಾಳೆ ರಂಗಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ

​ಪ್ರಜಾವಾಣಿ ವಾರ್ತೆ
Published 6 ಮೇ 2021, 13:57 IST
Last Updated 6 ಮೇ 2021, 13:57 IST
ರಂಗಸ್ವಾಮಿ
ರಂಗಸ್ವಾಮಿ   

ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ನೂತನ ಮುಖ್ಯಮಂತ್ರಿಯಾಗಿ ಆಲ್‌ ಇಂಡಿಯಾ ಎನ್‌.ಆರ್‌. ಕಾಂಗ್ರೆಸ್‌ ಮುಖ್ಯಸ್ಥ ಎನ್‌. ರಂಗಸ್ವಾಮಿ ಶುಕ್ರವಾರ (ಮೇ 7) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಸರಳ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಲಿದ್ದಾರೆ. ಅಂದು ರಂಗಸ್ವಾಮಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಬಿಜೆಪಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು, ನವಶಿವಯಂ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ADVERTISEMENT

ಮೇ 10ರ ಬಳಿಕ ಸಚಿವ ಸಂಪುಟ ರಚನೆಯಾಗಲಿದೆ ಎನ್ನಲಾಗಿದೆ. ಆಲ್‌ ಇಂಡಿಯಾ ಎನ್‌.ಆರ್‌.ಕಾಂಗ್ರೆಸ್‌ ಮತ್ತು ಬಿಜೆಪಿ ಮೈತ್ರಿಕೂಟ ಪುದಚೇರಿಯಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.