ನವದೆಹಲಿ: ಕಿರಿಯ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್ಪಾಲ್ ಮೇಲಿದೆ. ಸೋಮವಾರ ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಸ್ತುತ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ. ಇದು ಗಂಭೀರ ವಿಷಯ ಮತ್ತು ಸಂತ್ರಸ್ತೆಯ ಖಾಸಗಿತನದಮೇಲಿನ ದೌರ್ಜನ್ಯ ಎಂದಿದೆ.
ಗೋವಾದ ನ್ಯಾಯಾಲಯದಲ್ಲಿ ತನ್ನ ವಿರುದ್ದ ದಾಖಲಾಗಿರುವ ಅತ್ಯಾಚಾರ ಪ್ರಕರಣ ರದ್ದು ಮಾಡಬೇಕೆಂದು ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಈ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್ 6 ತಿಂಗಳೊಳಗೆ ಈ ವಿಚಾರಣೆ ಪೂರ್ಣಗೊಳಿಸಿ ಎಂದು ಗೋವಾ ನ್ಯಾಯಾಲಯಕ್ಕೆ ಆದೇಶಿಸಿದೆ.
ಏನಿದು ಪ್ರಕರಣ?
ತೆಹಲ್ಕಾದ ಸಂಸ್ಥಾಪಕ -ಸಂಪಾದಕ ತರುಣ್ ತೇಜ್ಪಾಲ್ 2013ರಲ್ಲಿ ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಅದೇ ಸಂಸ್ಥೆಯ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು.ಪಂಚತಾರಾ ಹೋಟೆಲ್ನ ಲಿಫ್ಟ್ನಲ್ಲಿ 52ರ ಹರೆಯದ ತರುಣ್ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಸಂತ್ರಸ್ತೆ ದೂರು ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.