ADVERTISEMENT

ರೇಪ್ ಇನ್ ಇಂಡಿಯಾ ಸಾಮಾನ್ಯ ಹೇಳಿಕೆ: ಶಶಿ ತರೂರ್

ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನ ಎಂದ ಕಾಂಗ್ರೆಸ್ ನಾಯಕ

ಪಿಟಿಐ
Published 13 ಡಿಸೆಂಬರ್ 2019, 8:58 IST
Last Updated 13 ಡಿಸೆಂಬರ್ 2019, 8:58 IST
   

ನವದೆಹಲಿ:ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ವಯನಾಡ್ ಸಂಸದ ರಾಹುಲ್ ಗಾಂಧಿ ನೀಡಿರುವುದು ಅತಿ ಸಾಮಾನ್ಯ ಹೇಳಿಕೆ. ಇದಕ್ಕೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರಹೇಳಿದ್ದಾರೆ.

ಸಂಸತ್ ಭವನದ ಹೊರಗಡೆ ವರದಿಗಾರರ ಬಳಿ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಈಗಿನ ಪರಿಸ್ಥಿತಿ ಬಗ್ಗೆ ಸಾಮಾನ್ಯ ಹೇಳಿಕೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈಶಾನ್ಯ ರಾಜ್ಯಗಳು ಹೊತ್ತಿ ಉರಿಯುತ್ತಿವೆ. ಇಂತಹ ಹೊತ್ತಿನಲ್ಲಿ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ’ ಎಂದು ಹೇಳಿದ್ದಾರೆ.

‘ರೇಪ್‌ ಇನ್ ಇಂಡಿಯಾ’ ಹೇಳಿಕೆಗೆ ರಾಹುಲ್ ಗಾಂಧಿ ಅವರು ಕ್ಷಮೆ ಕೋರಬೇಕು ಎಂದು ಸಂಸತ್‌ನ ಉಭಯ ಸದನಗಳಲ್ಲಿ ಬಿಜೆಪಿ ಸಂಸದರು ಆಗ್ರಹಿಸಿದ ಬೆನ್ನಲ್ಲೇ ಶಶಿ ತರೂರ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಗುರುವಾರ ಜನರನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಅಂದು‘ಮೇಕ್ ಇನ್ ಇಂಡಿಯಾ’ ಎಂದು ಹೇಳಿದ್ದರು. ಆದರೆ ಅದೀಗ ‘ರೇಪ್ ಇನ್ ಇಂಡಿಯಾ’ ಆಗಿದೆ ಎಂದು ಹೇಳಿದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.