ADVERTISEMENT

ಪಿ.ಎಂ ಕೇರ್ಸ್‌: ಟ್ರಸ್ಟಿಯಾಗಿ ರತನ್ ಟಾಟಾ ನಾಮನಿರ್ದೇಶನ

ಸಲಹಾ ಮಂಡಳಿಗೆ ಸುಧಾಮೂರ್ತಿ

ಪಿಟಿಐ
Published 22 ಸೆಪ್ಟೆಂಬರ್ 2022, 10:30 IST
Last Updated 22 ಸೆಪ್ಟೆಂಬರ್ 2022, 10:30 IST
ರತನ್‌ ಟಾಟಾ
ರತನ್‌ ಟಾಟಾ   

ನವದೆಹಲಿ: ‘ತುರ್ತು ಪರಿಸ್ಥಿತಿಗಳಲ್ಲಿ ನಾಗರಿಕರಿಗೆ ನೆರವು ಮತ್ತು ಪರಿಹಾರ ಕಲ್ಪಿಸುವ ಪಿಎಂ ಕೇರ್ಸ್‌ ನಿಧಿಯ ಟ್ರಸ್ಟಿಗಳಾಗಿ ಟಾಟಾ ಸನ್ಸ್ ಮುಖ್ಯಸ್ಥ ರತನ್‌ ಟಾಟಾ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಟಿ.ಥಾಮಸ್‌, ಲೋಕಸಭೆಯ ಮಾಜಿ ಉಪ ಸಭಾಪತಿ ಕರಿಯಾ ಮುಂಡಾ ಅವರನ್ನು ನಾಮನಿರ್ದೇಶನ ಮಾಡಲಾಗಿದೆ’ ಎಂದು ಪ್ರಧಾನ ಮಂತ್ರಿಯವರ ಕಾರ್ಯಾಲಯ (ಪಿಎಂಒ) ಬುಧವಾರ ತಿಳಿಸಿದೆ.

‘ಇನ್ಫೊಸಿಸ್‌ ಫೌಂಡೇಷನ್‌ನ ಸುಧಾ ಮೂರ್ತಿ, ಮಾಜಿ ಸಿಎಜಿ ರಾಜೀವ್‌ ಮೆಹರಿಷಿ, ಟೀಚ್‌ ಫಾರ್‌ ಇಂಡಿಯಾ ಸಂಸ್ಥೆಯ ಸಹ ಸ್ಥಾಪಕ ಆನಂದ ಶಾ ಸೇರಿದಂತೆ ಕೆಲವು ಗಣ್ಯರನ್ನುಪಿ.ಎಂ ಕೇರ್ಸ್‌ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡುವ ಕುರಿತು ನಿರ್ಣಯವನ್ನು ಟ್ರಸ್ಟ್‌ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.