ADVERTISEMENT

ಬಾಗಿಲು ಮುಚ್ಚಿದ ಕರಾಡ್‌ ಜನತಾ ಸಹಕಾರಿ ಬ್ಯಾಂಕ್‌

ಪಿಟಿಐ
Published 8 ಡಿಸೆಂಬರ್ 2020, 20:58 IST
Last Updated 8 ಡಿಸೆಂಬರ್ 2020, 20:58 IST
ದಿ ಕರಾಡ್ ಜನತಾ ಸಹಕಾರಿ ಬ್ಯಾಂಕ್
ದಿ ಕರಾಡ್ ಜನತಾ ಸಹಕಾರಿ ಬ್ಯಾಂಕ್   

ಮುಂಬೈ: ದಿ ಕರಾಡ್ ಜನತಾ ಸಹಕಾರಿ ಬ್ಯಾಂಕ್‌ಗೆ ನೀಡಿದ್ದ ಪರವಾನಗಿಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮಂಗಳವಾರ ರದ್ದು ಮಾಡಿದೆ. ಬ್ಯಾಂಕ್‌ ಬಳಿ ಅಗತ್ಯ ಪ್ರಮಾಣದ ಬಂಡವಾಳ ಇಲ್ಲದಿರುವುದು ಆರ್‌ಬಿಐನ ಈ ಕ್ರಮಕ್ಕೆ ಕಾರಣ.

ಈ ಬ್ಯಾಂಕ್‌ನಲ್ಲಿ ಹಣ ಠೇವಣಿ ಇರಿಸಿದ್ದ ಶೇಕಡ 99ಕ್ಕಿಂತ ಹೆಚ್ಚಿನವರಿಗೆ ಪೂರ್ಣ ಮೊತ್ತವು ವಾಪಸ್ ಸಿಗಲಿದೆ ಎಂದು ಆರ್‌ಬಿಐ ಹೇಳಿದೆ. ಪರವಾನಗಿ ರದ್ದಾಗಿರುವ ಕಾರಣ ಈ ಬ್ಯಾಂಕ್‌ ಇನ್ನು ಮುಂದೆ ಬ್ಯಾಂಕಿಂಗ್ ಚಟುವಟಿಕೆಗಳನ್ನು ನಡೆಸುವಂತಿಲ್ಲ.

‘ಈ ಬ್ಯಾಂಕ್‌ ಅಸ್ತಿತ್ವದಲ್ಲಿ ಇರುವುದು ಠೇವಣಿದಾರರ ಹಿತಕ್ಕೆ ಮಾರಕ. ಇದಕ್ಕೆ ಬ್ಯಾಂಕಿಂಗ್ ವಹಿವಾಟು ನಡೆಸಲು ಅವಕಾಶ ಕೊಟ್ಟರೆ ಸಾರ್ವಜನಿಕರ ಹಿತಕ್ಕೆ ಧಕ್ಕೆಯಾಗುತ್ತದೆ’ ಎಂದು ಆರ್‌ಬಿಐ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.