ADVERTISEMENT

ಕಾಂಗ್ರೆಸ್‌ ಪಕ್ಷದಲ್ಲಿ ಸ್ವಜನ ಪಕ್ಷಪಾತವಾದರೆ ರಾಜೀನಾಮೆ ನೀಡಲು ಸಿದ್ಧ: ಚಿದಂಬರಂ

​ಪ್ರಜಾವಾಣಿ ವಾರ್ತೆ
Published 11 ಜೂನ್ 2022, 11:24 IST
Last Updated 11 ಜೂನ್ 2022, 11:24 IST
ಚಿದಂಬರಂ
ಚಿದಂಬರಂ   

ಶಿವಗಂಗಾ(ತಮಿಳುನಾಡು): ಕಾಂಗ್ರೆಸ್‌ ಪಕ್ಷದಲ್ಲಿ ಒಂದೇ ಕುಟುಂಬದ ಹಲವರು ಉನ್ನತ ಹುದ್ದೆಯಲ್ಲಿ ಇದ್ದರೆ ಅಥವಾ ಪಕ್ಷದಲ್ಲಿ ಸ್ವಜನಪಕ್ಷಪಾತವಾದರೆ ರಾಜೀನಾಮೆ ನೀಡಲು ಸಿದ್ಧ ಎಂದು ಪಿ. ಚಿದಂಬರಂ ಹೇಳಿದ್ದಾರೆ.

ರಾಜ್ಯಸಭೆ ಚುನಾಚಣೆಯಲ್ಲಿ ತಮಿಳುನಾಡಿನ ಪರವಾಗಿ ಆಯ್ಕೆಯಾಗಿರುವುದರಿಂದ ತಮಿಳುನಾಡು ರಾಜಕೀಯದತ್ತ ಹೆಚ್ಚು ಗಮನ ಹರಿಸಲು ನನಗೆ ಅವಕಾಶ ಸಿಕ್ಕಿದೆ ಎಂದು ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಪಿ. ಚಿದಂಬರಂ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನೆಡೆ ಆಗಿಲ್ಲ ಎಂದರು. ಒಂದೇ ಕುಟುಂಬದವರಿಗೆ ರಾಜಕೀಯ ಸ್ಥಾನಮಾನಗಳು ಸಿಗುತ್ತವೆ ಎಂಬುದು ಕೇವಲ ಕಾಗ್ರೆಸ್ನಲ್ಲಿ ಮಾತ್ರವಲ್ಲ, ಬಿಜೆಪಿ ಸೇರಿದಂತೆ ಇತರ ಪಕ್ಷಗಳಲ್ಲೂ ಇದೆ. ಆ ಪ್ರಕ್ರಿಯೆ ಬದಲಾಗಬೇಕಿದೆ, ಬದಲಾಗುತ್ತದೆ ಕೂಡ. ಪರಿವರ್ತನೆಗಾಗಿ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಮಿಳುನಾಡು ಸರ್ಕಾರ ಒಂದು ವರ್ಷದ ಆಡಳಿತದಲ್ಲಿ ಯಾವುದೇ ತಪ್ಪು ನಿರ್ಧಾರ ತೆಗೆದುಕೊಂಡಿಲ್ಲ. ಮುಖ್ಯಮಂತ್ರಿಗಳು ಪ್ರತಿಯೊಂದು ನಿರ್ಧಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ದೇಶೀಯ ಆಡಳಿತದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಚಿದಂಬರಂ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.