ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ಉದ್ಘಾಟಿಸಿದ ನವೀಕೃತ ಕಾಶಿ ವಿಶ್ವನಾಥ ಧಾಮಕ್ಕೆ ವರ್ಷದ ಮೊದಲ ದಿನವಾದ ಶನಿವಾರ ಸುಮಾರು 5 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.
ವಾರಾಣಸಿಯಲ್ಲಿನ ಶಿವನ ದೇವಸ್ಥಾನಕ್ಕೆ ಮಹಾಶಿವರಾತ್ರಿ ದಿನ ಭೇಟಿ ನೀಡುವುದು ಒಳ್ಳೆಯದು ಎಂದು ಭಕ್ತರು ಭಾವಿಸಿದ್ದಾರೆ. ಆದರೆ, ಇದುವರೆಗೂ ಆ ದಿನ ಭಕ್ತರ ಸಂಖ್ಯೆ 2.5 ಲಕ್ಷ ದಾಟಿಲ್ಲ ಎಂದೂ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.