ನವದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿಯ ಹಾಜರಾತಿಯನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯವು ವಿವಿಧ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚಿಸಿದೆ.
ಗರ್ಭಿಣಿಯರು ಮತ್ತು ಅಂಗವಿಕಲ ಸಿಬ್ಬಂದಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಬೇಕು. ಆದರೆ, ಅವರು ಮನೆಯಿಂದಲೇ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದ್ದಾರೆ.
ಸಚಿವಾಲಯಗಳು, ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಕೆಳಹಂತದ ಎಲ್ಲ ಸಿಬ್ಬಂದಿ ಹಾಜರಾತಿಯನ್ನು ನಿರ್ವಹಣೆ ಮಾಡಬೇಕು. ಕಚೇರಿಗಳಲ್ಲಿ ದಟ್ಟಣೆ ಆಗದಂತೆ ವಿಭಾಗದ ಮುಖ್ಯಸ್ಥರು ಸೂಚಿಸಿದ ಸಮಯದಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ಬದ್ದರಾಗಬೇಕು. ಕಂಟೇನ್ಮೆಂಟ್ ವಲಯದಲ್ಲಿ ಇರುವ ಕಚೇರಿಗಳ ಸಿಬ್ಬಂದಿ ಪರಿಸ್ಥಿತಿ ತಹಬದಿಗೆ ಬರುವವರೆಗೂ ಕಚೇರಿಗೂ ಬರುವುದಕ್ಕೆ ವಿನಾಯಿತಿ ಇದೆ ಎಂದು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.