ನವದೆಹಲಿ: 71ನೇ ಗಣರಾಜ್ಯೋತ್ಸವ ಅಂಗವಾಗಿ ದೆಹಲಿಯ ರಾಜ್ಪಥ್ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿದರು.
ಗಣರಾಜ್ಯೋತ್ಸವ ಸಮಾರಂಭಕ್ಕೆ ಆಗಮಿಸಿದ ಪ್ರಧಾನಿ ಮೋದಿ ಹುತಾತ್ಮ ಯೋಧರ ಸ್ಮಾರಕ ಸ್ಥಳಕ್ಕೆ ತೆರಳಿ ಗೌರವ ನಮನ ಅರ್ಪಿಸಿದರು.
ಭಾರತೀಯ ಸೇನೆಯ ಸಶಸ್ತ್ರ ಪಡೆಗಳು ಶಕ್ತಿ ಪ್ರದರ್ಶನ ಮಾಡುವ ಮೂಲಕ ರಾಜ್ಪಥ್ನಲ್ಲಿ ನಡೆದ ಭವ್ಯ ಪಥಸಂಚಲನದ ಕೇಂದ್ರಬಿಂದು ಆಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.