ADVERTISEMENT

ಕೆಂಪುಕೋಟೆ ಹಿಂಸಾಚಾರ: ದೀಪ್ ಸಿಧುಗೆ ಮತ್ತೆ ಸಮನ್ಸ್‌

ಪಿಟಿಐ
Published 29 ಜೂನ್ 2021, 7:08 IST
Last Updated 29 ಜೂನ್ 2021, 7:08 IST
ದೀಪ್ ಸಿಧು
ದೀಪ್ ಸಿಧು   

ನವದೆಹಲಿ: ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಮತ್ತೆ ಸಮನ್ಸ್‌ ಜಾರಿ ಮಾಡಿದೆ.

ಜುಲೈ 12 ರಂದು ಎಲ್ಲಾ ಆರೋಪಿಗಳು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಚೀಫ್‌ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗಜೇಂದ್ರ ಸಿಂಗ್ ನಗರ್‌ ನಿರ್ದೇಶಿಸಿದರು.

ಈ ಹಿಂದೆ ನ್ಯಾಯಾಲಯವು ಆರೋಪಿಗಳಿಗೆ ಮಂಗಳವಾರ (ಜೂನ್‌ 29) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿತ್ತು. ಆದರೆ ಕೇವಲ ಹರ್ಜೊತ್‌ ಸಿಂಗ್‌ ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು.

‘ನ್ಯಾಯಾಲಯ ಜಾರಿಗೊಳಿಸಿದ ಸಮನ್ಸ್‌ ಆರೋಪಿಗಳಿಗೆ ಸಿಕ್ಕಿಲ್ಲ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗಿಲ್ಲ’ ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್‌, ಮತ್ತೊಮ್ಮೆ ಆರೋಪಿಗಳಿಗೆ ಸಮನ್ಸ್‌ ಜಾರಿಗೊಳಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.